ಮೊದಲನೆಯ ವಾಚನ: 1 ಪೇತ್ರ 1:10-16
28.05.24
27.05.24
ಮೊದಲನೆಯ ವಾಚನ: 1 ಪೇತ್ರ 1:3-9
26.05.24 - "ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ"
ಮೊದಲನೇ ವಾಚನ: ಧರ್ಮೋಪದೇಶಕಾಂಡ 4: 32-34, 39-40
ಹನ್ನೊಂದು ಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು. ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು. ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು.
25.05.24
24.05.24 - ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ
23.05.24
ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು. ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ನನ್ನಲ್ಲಿ ವಿಶ್ವಾಸ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು. ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಹಾಕು; ಎರಡು ಕೈಗಳಿದ್ದು ನರಕದ ಆರದ ಬೆಂಕಿಗೆ ಗುರಿಯಾಗುವುದಕ್ಕಿಂತ ಅಂಗಹೀನನಾಗಿ ಅಮರಜೀವವನ್ನು ಪಡೆಯುವುದೇ ಲೇಸು. ನಿನ್ನ ಕಾಲು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು, ಎರಡು ಕಾಲುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಕುಂಟನಾಗಿ ಅಮರಜೀವವನ್ನು ಪಡೆಯುವುದೇ ಲೇಸು. ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು. ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯದು, ಸುಡುವ ಬೆಂಕಿ ಆರದು. ಊಟಕ್ಕೆ ಉಪ್ಪಿನಂತೆ ಪ್ರತಿಯೊಬ್ಬನಿಗೆ ಅಗ್ನಿಪರೀಕ್ಷೆ ಅವಶ್ಯಕ. ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು. ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.