ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 14:2-10
10.07.2026 - ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು
09.07.2026 - “ಈ ಮನೆಗೆ ಶುಭವಾಗಲಿ!” ಎಂದು ಹರಸಿರಿ
ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 11:1, 3-4, 8-9
08.07.2026 - ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ
ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 10:1-3, 7-8, 12
07.07.2026 - “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ
ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 8:4-7, 11-13
06.07.2026 - ಮಗಳೇ, ಹೆದರಬೇಡ; ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,
ಮೊದಲನೇ ವಾಚನ: ಹೊಶೇಯ 2:16, 17-18, 21-22
04.07.2026 - ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ
ಮೊದಲನೆಯ ವಾಚನ: ಆಮೋಸ 9:11-15
03.07.2026 - ನನ್ನ ಪ್ರಭುವೇ, ನನ್ನ ದೇವರೇ,
ಮೊದಲನೇ ವಾಚನ : ಪ್ರೇಷಿತರ ಕಾರ್ಯಕಲಾಪಗಳು : 10:24-35
ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು. ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿನು ಅವನನ್ನು ಎದುರಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರ ಮಾಡಿದನು. ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, ಎದ್ದು ನಿಲ್ಲು, ನಾನೂ ಒಬ್ಬ ಸಾಮಾನ್ಯ ಮನುಷ್ಯನೇ,” ಎಂದನು.
ಕೊರ್ನೇಲಿಯನೊಡನೆ ಮಾತನಾಡುತ್ತಾ ಪೇತ್ರನು ಮನೆಯೊಳಕ್ಕೆ ಬಂದಾಗ ಅಲ್ಲಿ ಅನೇಕ ಜನರು ಸಭೆ ಸೇರಿರುವುದನ್ನು ಕಂಡನು. ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ. ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.
ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು. ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ. ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು. ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.
ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ. ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.
-ಪ್ರಭುವಿನ ವಾಕ್ಯ
ಕೀರ್ತನೆ
42: 2-5. v. 5
ಶ್ಲೋಕ: ಜೀವಂತ ದೇವರಿಗಾಗಿ ದಾಹದಿಂದಿದೆ ಎನ್ನ ಮನ.
1. ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ|
ದಣಿದೆನ್ನ ಮನ ದೇವಾ ಹಂಬಲಿಸುತಿದೆ ನಿನಗಾಗಿ||
ಶ್ಲೋಕ
2. ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ|
ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ||
ಶ್ಲೋಕ
3. ಜನಸಮೂಹದೊಡನೆ ನಾ ಜಯಜಯಕಾರ ಮಾಡುತ|
ಸ್ತುತಿಗೀತೆಗಳ ಹಾಡುತ ತೀರ್ಥಯಾತ್ರೆ. ಗೈಯುತ|
ದೇಗುಲಕೆ ತೆರಳಿದಾ ಸವಿನೆನಪು ಮನಗರಗಿಸುವುದು ನಿರುತ||
ಶ್ಲೋಕ
4. ಎನ್ನ ಮನವೇ, ಚಿಂತಿಸುವೆಯೇಕೆ?|
ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ||
ಮತ್ತೆ ಸ್ತುತಿಸುವೆ ನಾನಾತನನು|
ಮುಕ್ತಿದಾತ ಪರಮಾತ್ಮ ಆತನೆನಗೆ||
ಶ್ಲೋಕ
ಎರಡನೇ ವಾಚನ : ಹಿಬ್ರಿಯರಿಗೆ 1:2-3
-ಪ್ರಭುವಿನ ವಾಕ್ಯ
10.07.2026 - ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು
ಮೊದಲನೇ ವಾಚನ: ಪ್ರವಾದಿ ಹೋಶೇಯನ ಗ್ರಂಥ 14:2-10 ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ. ಆದುದರ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...













