ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 25:13-21
![]() |
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 25:13-21
![]() |
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 22:30; 23:6-11
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 20:17-27
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 19:1-8
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1:1-11
ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು. ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು. ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ. ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು. ಯೇಸುಸ್ವಾಮಿಯ ಸ್ವರ್ಗಾರೋಹಣ ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್ ಸ್ಥಾಪಿಸುವಿರೋ?” ಎಂದು ಕೇಳಿದರು.ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ. ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು. ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು. ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು. “ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತಿರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿ ಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18: 23-28
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18
ಕೀರ್ತನೆಯಿಂದ ಕೊಂಡಾಡಿರಿ ಆತನನು II
ಶುಭಸಂದೇಶ: ಯೊವಾನ್ನ 16:20-23
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 25:13-21 ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು. ಅವರು ...