ಮೊದಲನೇ ವಾಚನ: 2 ತಿಮೊಥೇಯನಿಗೆ 1:1-3, 6-12

ಕೀರ್ತನೆ: 12:1-3
ಶ್ಲೋಕ: ನನ್ನ ಕಣ್ಣುಗಳನು ಪ್ರಭೂ, ನಿನ್ನ ಕಡೆಗೆ ಎತ್ತಿರುವೆ
1. ಸ್ವರ್ಗದಲಿ ಆಸೀನಾಗಿರುವ ಪ್ರಭೂ,|
ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ|
ದಾಸನ ಕಣ್ಣು ಯಜಮಾನನತ್ತ||
ಶ್ಲೋಕ
2. ದಾಸಿಯ ಕಣ್ಣು ಯಜಮಾನಿಯತ್ತ|
ನನ್ನ ಕಣ್ಣು ಪ್ರಭು ದೇವನತ್ತ|
ಆತನ ಕಟಾಕ್ಷವನು ನಿರೀಕ್ಷಿಸುತ್ತಾ||
ಶುಭಸಂದೇಶ ಮಾರ್ಕ 12:18-27
ಅನಂತರ ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲವೆಂಬುದು ಇವರ ಅಭಿಮತ. ಇವರು ಯೇಸುವನ್ನು, “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ? ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು. ಅವನು ಮಕ್ಕಳಿಲ್ಲದೆ ಮೃತನಾದುದರಿಂದ ಎರಡನೆಯವನು ಅವನ ಹೆಂಡತಿಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸಾವನ್ನಪ್ಪಿದ. ಮೂರನೆಯವನಿಗೂ ಇದೇ ಗತಿಯಾಯಿತು. ಅನಂತರ, ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆ ಮಾಡಿಕೊಂಡು, ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣ ಹೊಂದಿದಳು. ಈಗ ಹೇಳಿ, ಪುನರುತ್ಥಾನದ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು? ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?” ಎಂದು ಪ್ರಶ್ನಿಸಿದರು. ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ. ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ. ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ? ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ, ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ,” ಎಂದರು.












