ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:1-11
29.06.2026 - ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು,
28.06.2026 - ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ

26.06.2026 - ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು.
ಮೊದಲನೇ ವಾಚನ: 2 ಅರಸುಗಳು 25:1-12
25.06.2026 - ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ
ಮೊದಲನೇ ವಾಚನ: ೨ ಅರಸುಗಳು 24:8-17
24.06.2026 - "ಇವನ ಹೆಸರು ಯೊವಾನ್ನ
ಮೊದಲನೆಯ ವಾಚನ
ಪ್ರವಾದಿ ಯೆಶಾಯನ ಗ್ರಂಥ 49:1-6
"ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ, "ಇಂತೆಂದುಕೊಂಡೆ ನಾನಾಗ. ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ, ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ. ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ. ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು, ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು, ತನ್ನ ದಾಸನನ್ನಾಗಿ ನನ್ನ ರೂಪಿಸಿದನು. ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲ್ಲಿ; ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲ್ಲಿ. ಮತ್ತೆ ಆತ ಇಂತೆಂದನು ನನಗೆ:
"ಮಹಾತ್ಕಾರ್ಯವೇನೂ ಅಲ್ಲ. ನನ್ನ ದಾಸನಾದ ನಿನಗೆ ಕುಲಗಳನ್ನು ಉದ್ದರಿಸುವ ಮಾತ್ರಕೆ, ಇಸ್ರಯೇಲರಲ್ಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವ ಜನಾಂಗಗಳಿಗೆ, ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟ ಕಡೆಯವರೆಗೆ."
- ಪ್ರಭುವಿನ ವಾಕ್ಯ
ಕೀರ್ತನೆ: 139: 1-3,13-14,15
ಶ್ಲೋಕ: ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ, ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ.
1. ಪ್ರಭೂ, ಪರಿಶೋಧಿಸಿರುವೆ ನೀ ನನ್ನನು|
ನೀ ಅರಿತುಕೊಂಡಿರುವ ಅಂತರಂಗವನು||
ನಾ ಕೂರುವುದೂ ಏಳುವುದು ನಿನಗೆ ಗೊತ್ತಿದೆ|
ನನ್ನ ಆಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|
ನನ್ನ ನಡೆತೆಯಲ್ಲವು ನಿನಗೆ ಸುಪರಿಚಿತ||
2. ನನ್ನ ಅಂತರಂಗವನು ಉಂಟುಮಾಡಿದಾತ ನೀನು|
ತಾಯಗರ್ಭದಲೇ ನನ್ನ ರೂಪಿಸಿದಾತ ನೀನು||
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ|
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ||
3. ನನ್ನ ಅಸ್ಥಿಪಂಜರವನು ರೂಪಿಸುವಾಗ|
ತಾಯಗರ್ಭದೊಳು ಅಚ್ಚರದಿ ರಚಿಸುವಾಗ||
ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ|
ಮರೆಯಾಗಿರಲಿಲ್ಲ ನಾನು ನಿನಗಾಗ||
ಎರಡನೆಯ ವಾಚನ : ಪ್ರೇಷಿತರ ಕಾರ್ಯಕಲಾಪ 13:22-26
ಪ್ರಭುವಿನ ವಾಕ್ಯ
ಅಲ್ಲೆಲೂಯ, ಅಲ್ಲೆಲೂಯ!
"ಸುಕುಮಾರ, ನೀನೆನಿಸಿಕೊಳ್ಳುವೆ ಪರಾತ್ಪರನ ಪ್ರವಾದಿ | ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ ಮುಂದಾಗಿ ತೆರಳಿ ||
ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:57-66,80
ದಿನ ತುಂಬಿದಾಗ ಎಲಿಜಬೇತಳು ಗಂಡು ಮಗುವಿಗೆ ಜನ್ಮವಿತ್ತಳು. ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು. ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿದ್ದರು. ಆದರೆ ಮಗುವಿನ ತಾಯಿ, "ಇಲ್ಲ, ಅದು ಕೂಡದು, ಅವನಿಗೆ 'ಯೊವಾನ್ನ' ಎಂಬ ಹೆಸರಿಡಬೇಕು, " ಎಂದಳು. ಅದಕ್ಕೆ ಅವರು, "ನಿನ್ನ ಬಂಧು ಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ, "ಎಂದು ಹೇಳಿ, "ಮಗುವಿಗೆ ಏನು. ಹೆಸರಿಡಬೇಕೆನ್ನುತ್ತೀರಿ? "ಎಂದು ಮಗುವಿನ ತಂದೆಗೆ ಸನ್ನೆ ಮಾಡಿ ಕೇಳಿದರು. ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, "ಇವನ ಹೆಸರು ಯೊವಾನ್ನ " ಎಂದು ಬರೆದನು. ಎಲ್ಲರೂ ಬೆರಗಾದರು. ತಕ್ಷಣವೇ ಅವನಿಗೆ ಬಾಯಿ ಬಂದಿತು. ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು. ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು. ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ಈ ಮಗು ಮುಂದೆ ಎಂಥವನಾಗುವನೋ! " ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು. ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.
- ಪ್ರಭುಕ್ರಿಸ್ತರ ಶುಭಸಂದೇಶ
23.06.2026 - ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿ ಬಿಟ್ಟಾವು
ಮೊದಲನೇ ವಾಚನ: 2 ಅರಸುಗಳು 19:9-11, 14-21, 31-35, 36
ಸರ್ವ ಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ|
ದೇವನಖರದಲ್ಲಿ ಆತನ ಪವಿತ್ರ ಪರ್ವತ||
ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ|
ಆನಂದದಾಯಕ ರಾಜಾಧಿರಾಜನ ಆ ನಗರ||
ಅದರ ಕೋಟೆಕೊತ್ತಲಗಳ ನಡುವೆ ದೇವನು|
ತಾನೇ ಸುಭದ್ರ ದುರ್ಗವೆಂದು ತೋರಿಹನು||
ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು|
ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು||
ನಿನ್ನ ನಾಮದಂತೆ ನಿನ್ನಾ ಹೊಗಳಿಕೆ|
ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ ||
ಘೋಷಣೆ ಯೊವಾನ್ನ 17:17
ಅಲ್ಲೆಲೂಯ, ಅಲ್ಲೆಲೂಯ!
ಪಿತನೇ, ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.
ಅಲ್ಲೆಲೂಯ!
22.06.2026 - ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ
ಮೊದಲನೇ ವಾಚನ: 2 ಅರಸುಗಳು 17:5-8, 13-15, 18
29.06.2026 - ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು,
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:1-11 ಆ ದಿನಗಳಲ್ಲಿ ಅರಸ ಹೆರೋದನು ಕ್ರೈಸ್ತಸಭೆಯ ಸದಸ್ಯರಲ್ಲಿ ಕೆಲವರನ್ನು ಹಿಂಸಿಸಲು ಆರಂಭಿಸಿದನು. ಯೊವಾನ್ನನ ಸಹೋದರ ಯಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...











