ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 28:16-20, 30-31
23.05.2026 - ಪ್ರಭುವೇ, ನಿಮ್ಮನ್ನು ಹಿಡಿದು ಕೊಡುವಂಥ ಸ್ವಾಮಿ ದ್ರೋಹಿ ಯಾರು?
22.05.2026 - ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 25:13-21
![]() |
21.05.2026 - ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 22:30; 23:6-11
ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು. ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು. ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು. ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ. ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು. ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು. ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.
ಶುಭಸಂದೇಶ: ಯೊವಾನ್ನ 17:20-26
19.05.2026 - ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 20:17-27
ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು!
ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ. ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು. ಏಕೈಕ ನಿಜ ದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ. ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು. ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ. “ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ. ನೀವು ನನಗೆ ಕೊಟ್ಟಿದೆಲ್ಲವೂ ನಿಜವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ. ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ. “ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ. ಏಕೆಂದರೆ, ಇವರು ನಿಮ್ಮವರು; ಇವರಿಂದ ನನಗೆ ಮಹಿಮೆ ಉಂಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ. ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.
18.05.2026 - ನಿಮಗೆ ನನ್ನಲ್ಲಿ ಶಾಂತಿ ಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 19:1-8
ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು, “ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?’ ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು. ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು. ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು. ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು. ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು. ಇವರು ಸುಮಾರು ಹನ್ನೆರಡು ಮಂದಿ ಇದ್ದಿರಬಹುದು. ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.
17.05.2026 - ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 1:1-11
ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು. ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು. ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ. ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು. ಯೇಸುಸ್ವಾಮಿಯ ಸ್ವರ್ಗಾರೋಹಣ ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್ ಸ್ಥಾಪಿಸುವಿರೋ?” ಎಂದು ಕೇಳಿದರು.ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ. ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು. ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು. ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು. “ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತಿರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿ ಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.
ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ. ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ಥ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು. ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು. ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೇಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು. ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ. ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.
16.05.2026 - ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇ ತೀರುವರು
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18: 23-28
ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇ ತೀರುವರು. ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು. “ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು. ಆ ಕಾಲವು ಬಂದಾಗ ನನ್ನ ಹೆಸರು ಹೇಳಿ ನೀವೇ ಪಿತನಲ್ಲಿ ಬೇಡುವಿರಿ. ನಿಮ್ಮ ಪರವಾಗಿ ನಾನು ಪಿತನಲ್ಲಿ ಬೇಡಿಕೊಳ್ಳುವೆನೆಂದು ನಾನು ಹೇಳುವುದಿಲ್ಲ. ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ. ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.
23.05.2026 - ಪ್ರಭುವೇ, ನಿಮ್ಮನ್ನು ಹಿಡಿದು ಕೊಡುವಂಥ ಸ್ವಾಮಿ ದ್ರೋಹಿ ಯಾರು?
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 28:16-20, 30-31 ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...
-
ಮೊದಲನೇ ವಾಚನ: ಯೆಶಾಯ 58:7-10 ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗ...








.jpg)


