ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ
ಕ್ಷಮೆಯ ಕುರಿತು ಬೈಬಲ್ ವಾಕ್ಯಗಳು
ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ
14.09.2026 - IIಇಂದಿನ ಬೈಬಲ್ ವಾಚನಗಳುIIಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿ ಹೋದವರಿಲ್ಲ
ಮೊದಲನೇ ವಾಚನ: ಸಂಖ್ಯಾಕಾಂಡ - 21:4-9
ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತನಾಡತೊಡಗಿದರು: "ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,", ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹು ಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, "ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ," ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜ ಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿಯೊಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು," ಎಂದು ಆಜ್ಞಾಪಿಸಿದರು. ಅಂತೆಯೇ ಮೋಶೆ ಕಂಚಿನಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜ ಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.
ಗಮನಕೊಡಿ ನಾ ಹೇಳುವ ಮಾತುಗಳಿಗೆ||
ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು|
ಹೊರಪಡಿಸುವೆನು ಪೂರ್ವಕಾಲದ ಗೂಢಾರ್ಥಗಳನು||
ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ||
ನೆನೆದರಾಗ ದೇವರೇ ತಮಗಾಶ್ರಯದುರ್ಗವೆಂದು|
ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು||
ಆದರೆ ಅವರ ನಾಲಿಗೆಯಾಡಿತು ಅಸತ್ಯ|
ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ||
ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ|
ಬದ್ದರಾಗಿರಲಿಲ್ಲ ಆತನ ನಿಬಂಧನೆಗಳಲಿ||
ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ|
ಕೋಪವ ತಾಳಿಕೊಂಡನು, ಹಲವು ವೇಳೆ ಉದ್ರೇಕಗೊಳ್ಳದೆ||
ಯೇಸು ನಿಕೊದೇಮನಿಗೆ ಇಂತೆಂದರು: "ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ. ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು. ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು. ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯ ಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ. ದೇವವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿ ಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.
13.09.2026 - ಸಾಧಾರಣ ಕಾಲದ ಇಪ್ಪತ್ತನಾಲ್ಕನೇ ಭಾನುವಾರIIಇಂದಿನ ಬೈಬಲ್ ವಾಚನಗಳು II ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?
ಮೊದಲನೇ ವಾಚನ: ಸಿರಾಖನು 27:30--28:7
ಕೀರ್ತನೆ: 103:1-2, 3-4, 9-10, 11-12
1. ಭಜಿಸು ಎನ್ನ ಮನವೇ, ಭಜಿಸು ಪ್ರಭುವನು|
ನನ್ನ ಅಂತರಂಗವೇ, ಭಜಿಸು ಆತನನು|
ನೆನೆ ಆತನ ಪರಮ ಪಾವನ ನಾಮವನು||
ಭಜಿಸು ನನ್ನ ಮನವೇ, ಭಜಿಸು ಪ್ರಭುವನು|
ಮರೆಯದಿರು ಆತನ ಉಪಕಾರಗಳೊಂದನು||
ಶ್ಲೋಕ
2. ಮನ್ನಿಸುವನಾತ ನನ್ನ ದೋಷಗಳನು|
ವಾಸಿಮಾಡುವನು ನನ್ನ ರೋಗಗಳನು||
ಉಳಿಸುವನು ಪಾತಾಳದ ಕೂಪದಿಂದ ನನ್ನನು|
ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು||
ಶ್ಲೋಕ
ನಿತ್ಯಕ್ಕೂ ಕೋಪ ಇಟ್ಟುಕೊಳ್ಳುವವನಲ್ಲ||
ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ|
ನಮ್ಮ ಅಪರಾಧಗಳಿಗೆ ತಕ್ಕ ಹಾಗೆ ದಂಡಿಸಲಿಲ್ಲ||
ಶ್ಲೋಕ
ದೈವ ಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ||
ಪಡುವಣದಿಂದ ಮೂಡಣವೆಷ್ಟೋ ದೂರ|
ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ||
ಶ್ಲೋಕ
ಎರಡನೇ ವಾಚನ: ರೋಮನರಿಗೆ14:7-9
ಶುಭಸಂದೇಶ: ಮತ್ತಾಯ18:21-35
12.09.2026 - ಶನಿವಾರ IIಇಂದಿನ ಬೈಬಲ್ ವಾಚನಗಳುII ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿ ಮಾತಾಗಿ ತುಳುಕುತ್ತದೆ
ಮೊದಲನೇ ವಾಚನ: 1 ಕೊರಿಂಥಿಯರಿಗೆ 10:14-22
ಕೀರ್ತನೆ: 116:12-13, 17-18
ಶ್ಲೋಕ: ಅರ್ಪಿಸುವೆ ಪ್ರಭೂ ನಾ ನಿನಗೆ ಕೃತಜ್ಞತಾಬಲಿಗಳನು
1. ಪ್ರಭು ನನಗೆ ಮಾಡಿದ ಮಹೋಪಕಾರಗಳಿಗಾಗಿ|
ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು|
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು||
ಶ್ಲೋಕ
2. ಅರ್ಪಿಸುವೆ ನಾ ನಿನಗೆ ಕೃತಜ್ಞತಾಬಲಿಗಳನು|
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು||
ತೀರಿಸುವೆನು ಆತನ ಸಭೆಯ ಸಮ್ಮುಖದೊಳು|
ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು||
ಶ್ಲೋಕ
ಘೋಷಣೆ
ಅಲ್ಲೆಲೂಯ, ಅಲ್ಲೆಲೂಯ.
ತೋರು ನಿನ್ನ ಮುಖದರ್ಶನ ಈ ದಾಸನಿಗೆ| ನೀ ಕಲಿಸು ನಿನ್ನ ನಿಬಂಧನೆಗಳನು ಎನಗೆ||
ಅಲ್ಲೆಲೂಯ.
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದು ಹೇಳಿದರು: “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ. ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ. “ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ? ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ: ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು. ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.
11.09.2026 - ಶುಕ್ರವಾರIIಇಂದಿನ ಬೈಬಲ್ ವಾಚನಗಳುIIಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ?
ಮೊದಲನೇ ವಾಚನ: 1 ಕೊರಿಂಥಿಯರಿಗೆ 9:16-19, 22-27
ಸಹೋದರರೇ, ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ! ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ. ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ. ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ, ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ. ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನ ಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ. ನಾನಾದರೋ ಗೊತ್ತು ಗುರಿಯಿಲ್ಲದವನಂತೆ ಓಡುವುದಿಲ್ಲ, ಗಾಳಿಯೊಡನೆ ಗುದ್ದಾಡುವವನಂತೆ ಹೋರಾಡುವುದಿಲ್ಲ. ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.
ಕೀರ್ತನೆ: 84:3, 4, 5-6, 8, 12
ಶ್ಲೋಕ: ಸ್ವರ್ಗಸೇನಾಧೀಶ್ವರಾ, ನಿನ್ನ ನಿವಾಸಗಳೆನಿತೋ ಸುಂದರ
ಕಾಣಬೇಕೆಂದು ಪ್ರಭುವಿನ ಪ್ರಾಂಗಣ|
ಸ್ವಾಮಿ ದೇವಾ, ಎನ್ನರಸಾ, ಸ್ವರ್ಗ ಸೇನಾಧೀಶ್ವರಾ||
ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ|
ಪಾರಿವಾಳಕ್ಕೂ ಅಲ್ಲೇ ಇದೆ ಮರಿಯಿಡಲು ಆಗರ||
ಶ್ಲೋಕ
2. ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು|
ನಿರಂತರವೂ ನಿನ್ನ ಗುಣಗಾನ ಮಾಡುವರವರು||
ನಿನ್ನಿಂದ ಶಕ್ತಿ ಪಡೆಯುವವರು ಧನ್ಯರು|
ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು||
ಶ್ಲೋಕ
ಕಾದಿಟ್ಟು ರಕ್ಷಿಸುವ ಗುರಾಣಿಯು|
ಸನ್ಮಾರ್ಗಿಗೆ ಈವನು ಸಕಲ ವರಗಳನು||
ಶ್ಲೋಕ
ಘೋಷಣೆ
(ಕೀರ್ತನೆ 119: 105)
ಅಲ್ಲೆಲೂಯ, ಅಲ್ಲೆಲೂಯ.
ನಿನ್ನ ವಾಕ್ಯ ನನಗೆ ದಾರಿದೀಪ| ನನ್ನ ಕಾಲಿನ ನಡೆಗೆ ಕೈದೀಪ||
ಅಲ್ಲೆಲೂಯ.
ಶುಭಸಂದೇಶ: ಲೂಕ 6:39-42
ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನೂ ಹೇಳಿದರು: “ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೆ? ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು. “ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು."
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ
10.09.2026 - ಗುರುವಾರ IIಇಂದಿನ ಬೈಬಲ್ ವಾಚನಗಳುIIಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ
ಮೊದಲನೇ ವಾಚನ: 1 ಕೊರಿಂಥಿಯರಿಗೆ 8:1-7, 11-13
ಕೀರ್ತನೆ: 139:1-3, 13-14, 23-24
ಶ್ಲೋಕ: ನಡೆಸೆನ್ನನು ಪ್ರಭೂ, ಆ ಸನಾತನ ಪಥದಲಿ
ನಾ ಕೂರುವುದು ಏಳುವುದೂ ನಿನಗೆ ಗೊತ್ತಿದೆ|
ನನ್ನ ಆಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|
ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ||
ಶ್ಲೋಕ
2. ನನ್ನ ಅಂತರಂಗವನು ಉಂಟುಮಾಡಿದಾತ ನೀನು|
ತಾಯ ಗರ್ಭದಲೇ ನನ್ನ ರೂಪಿಸಿದಾತ ನೀನು|
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ||
ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ|
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ||
ಶ್ಲೋಕ
ಪರೀಕ್ಷಿಸಿ ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ||
ಕೇಡಿದೆಯೇ ನೋಡು ನನ್ನ ಮಾರ್ಗದಲಿ|
ನಡೆಸೆನ್ನನು ಆ ಸನಾತನ ಪಥದಲಿ||
ಶ್ಲೋಕ
(ಕೀರ್ತನೆ 119: 88)
ಅಲ್ಲೆಲೂಯ, ಅಲ್ಲೆಲೂಯ.
ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು |
ಅಲ್ಲೆಲೂಯ.
ಶುಭಸಂದೇಶ: ಲೂಕ 6:27-38
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: ‘ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ. ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು. ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು. ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೆ? ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರಲ್ಲವೆ? ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಠರು ಸಹ ಸಾಲ ಕೊಡುತ್ತಾರಲ್ಲವೆ?’ “ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು. ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ. “ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ. ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದು ಕೊಡುವರು," ಎಂದರು.
ಪ್ರಭುಕ್ರಿಸ್ತರ ಶುಭಸಂದೇಶ
ಕ್ರಿಸ್ತರೇ, ನಿಮಗೆ ಸ್ತುತಿ ಸಲ್ಲಲಿ
ಕ್ಷಮೆಯ ಕುರಿತು ಬೈಬಲ್ ವಾಕ್ಯಗಳು
ಕೋಪವು ನಿಮ್ಮ ಹೃದಯವನ್ನು ನಿಯಂತ್ರಿಸುತ್ತಿರುವಾಗ - ಮತ್ತಾಯ 5:44 ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 1 ಕೊರಿಂಥಿಯರಿಗೆ 8:1-7, 11-13 ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...











