ಮೊದಲನೇ ವಾಚನ: ಯೆಜೆಕಿಯೇಲ 33:7-9
06.09.2026 - ಸಾಧಾರಣ ಕಾಲದ 23ನೇ ಭಾನುವಾರ II ಇಂದಿನ ಬೈಬಲ್ ವಾಚನ IIಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.
05.09.2026 - ಶನಿವಾರII ಇಂದಿನ ಬೈಬಲ್ ವಾಚನ II ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ

ಮೊದಲನೇ ವಾಚನ: 1 ಕೊರಿಂಥಿಯರಿಗೆ 4: 6-15
ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ವಿೂರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು. ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ? ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು! ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ. ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ದಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು! ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ. ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ. ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು! ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು. ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.
ಕೀರ್ತನೆ: 145:17-18, 19-20, 21
ಶ್ಲೋಕ: ಹತ್ತಿರ ಇಹನು ಪ್ರಭು ಕರೆಯುವಾವರೆಲ್ಲರಿಗೆ
1 ಪ್ರಭುವಿನ ಮಾರ್ಗ ಧರ್ಮಸಮ್ಮತ|
ಆತನ ಕಾರ್ಯವೆಲ್ಲ ಪುನೀತ||
ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ|
ಯಥಾರ್ಥವಾಗಿ ಆತನನು ಅರಸುವವರಿಗೆ||
ಶ್ಲೋಕ
2. ಹೆದರಿನಡೆಯುವವರ ಇಷ್ಟವನು ಈಡೇರಿಸುವನು|
ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು||
ಸಲಹುವನು ತನ್ನನು ಪ್ರೀತಿಸುವವರೆಲ್ಲರನು|
ನಾಶಮಾಡುವನು ದುರ್ಮಾರ್ಗಿಗಳೆಲ್ಲರನು||
ಶ್ಲೋಕ
3. ಉಸುರುತದೆ ನನ್ನ ನಾಲಿಗೆ ಪ್ರಭುವಿನ ಸ್ತೋತ್ರವನು|
ನರರೆಲ್ಲರು ಸ್ತುತಿಸಲಿ ಸತತ ಆತನ ಶ್ರೀ ನಾಮವನು||
ಶ್ಲೋಕ
ಘೋಷಣೆ
(ಕೀರ್ತನೆ 119: 18)
ಅಲ್ಲೆಲೂಯ, ಅಲ್ಲೆಲೂಯ.
ನಿನ್ನ ಶಾಸ್ತ್ರದ ಮಹಿಮೆಯನು ಅರಿಯುವಂತೆ | ನನ್ನ ಕಣ್ಣುಗಳಿಂದ ನೀ ತೆಗೆದುಬಿಡು ಅಂಧತೆ ||
ಅಲ್ಲೆಲೂಯ.

04.09.2026 - ಶುಕ್ರವಾರII ಇಂದಿನ ಬೈಬಲ್ ವಾಚನIIಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ
03.09.2026 - ಗುರುವಾರ II ಇಂದಿನ ಬೈಬಲ್ ವಾಚನ IIಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ
ಮೊದಲನೆಯ ವಾಚನ: 1 ಕೊರಿಂಥಿಯರಿಗೆ 3:18-23
02.09.2026 - ನೀವು ದೇವರ ಪುತ್ರ
ಮೊದಲನೇ ವಾಚನ: 1 ಕೊರಿಂಥಿಯರಿಗೆ 3:1-9
ಕೀರ್ತನೆ: 33:12-13, 14-15, 20-21
ಶ್ಲೋಕ: ಸ್ವಜನರಾಗಿ ಪ್ರಭು ಆಯ್ದುಕೊಂಡ ಜನತೆ ಧನ್ಯ
1. ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ|
ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ!||
ವೀಕ್ಷಿಸುತಿಹನು ಪ್ರಭು ಸಮಸ್ತವನು ಪರದಿಂದ|
ಲಕ್ಷಿಸುತಿಹನು ಮನುಜರನು ಸಿಂಹಾಸನದಿಂದ||
ಶ್ಲೋಕ
2. ಸ್ಥಾವರ ಸಿಂಹಾಸನದಿಂದ ನೋಡುತಿಹನು|
ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು||
ಅವರೆಲ್ಲರ ಹೃದಯಗಳನ್ನು ನಿರ್ಮಿಸಿದಾತನವನು ಅವರವರ ಕೃತ್ಯಗಳನು ಪರೀಕ್ಷಿಸುತಿಹನು||
ಶ್ಲೋಕ
3. ಕಾದಿದೆ ಎನ್ನ ಮನ ಪ್ರಭುವಿಗಾಗಿ|
ಆತನಿಹನು ಎನಗೆ ಗುರಾಣಿಯಾಗಿ||
ನೆಮ್ಮದಿಯಿಂದಿದೆ ಎನ್ನ ಮನ ಆತನಲಿ|
ನಂಬಿರುವೆವು ಆತನ ಶ್ರೀ ನಾಮದಲಿ||
ಶ್ಲೋಕ
ಘೋಷಣೆ
(ಕೀರ್ತನೆ 27: 11)
ಅಲ್ಲೆಲೂಯ, ಅಲ್ಲೆಲೂಯ.
ಬೋಧಿನೆನಗೆ ಪ್ರಭೂ, ನಿನ್ನ ಮಾರ್ಗವನು | ಶತ್ರುರಹಿತ ಹಾದಿಯಲಿ ನಡೆಸು ಎನ್ನನು ||
ಅಲ್ಲೆಲೂಯ.
ಶುಭಸಂದೇಶ: ಲೂಕ 4:38-44
01.09.2026 - ಇಂದಿನ ಬೈಬಲ್ ವಾಚನ | ಎಂಥಾ ಮಾತುಗಳಿವು, ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆ ಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ
ಮೊದಲನೇ ವಾಚನ: 1 ಕೊರಿಂಥಿಯರಿಗೆ 2:10-16
31.08.2026 - ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ
ಮೊದಲನೇ ವಾಚನ: ಕೊರಿಂಥಿಯರಿಗೆ 2:1-5
ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ, ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು: “ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.” ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು. ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು. ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ. ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು. ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು. ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು. ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಕೋಪಗೊಂಡರು. ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು. ಯೇಸುವಾದರೋ, ಅವರ ನಡುವೆಯೇ ನಡೆದು, ತಮ್ಮ ದಾರಿ ಹಿಡಿದುಹೋದರು.
06.09.2026 - ಸಾಧಾರಣ ಕಾಲದ 23ನೇ ಭಾನುವಾರ II ಇಂದಿನ ಬೈಬಲ್ ವಾಚನ IIಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.
ಮೊದಲನೇ ವಾಚನ: ಯೆಜೆಕಿಯೇಲ 33:7-9 ಕರ್ತರು ನನಗೆ ಇಂತೆಂದರು: “ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ : ಪ್ರೇಷಿತರ ಕಾರ್ಯಕಲಾಪಗಳು : 10:24-35 ಮರುದಿವಸ ಅವನು ಸೆಜರೇಯವನ್ನು ತಲುಪಿದನು . ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊ...











