ಮೊದಲನೇ ವಾಚನ: ಯೆರೆಮಿಯ 20:10-13
27.03.2026 - ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು
26.03.2026 - ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ
ಮೊದಲನೆಯ ವಾಚನ: ಆದಿಕಾಂಡದಿಂದ ಇಂದಿನ ವಾಚನ 17:3-9
ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ದೇವರು ಅವನಿಗೆ, " ನಾನು ನಿನಗೆ ವಾಗ್ಧಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಟ್ರಗಳಿಗೆ ಮೂಲಪುರುಷನಾಗುವೆ. ಇನ್ನು ಮುಂದೆ ನಿನಗೆ 'ಅಬ್ರಾಮ' ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲ ಪುರುಷನನ್ನಾಗಿ ನೇಮಿಸುವುದರಿಂದ ನಿನಗೆ 'ಅಬ್ರಹಾಮ' ಎಂಬ ಹೆಸರಿರುವುದು. ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು. ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರ ಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ. ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ. " ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: " ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು. ನೀನು ಮಾತ್ರವಲ್ಲ, ನಿನ್ನ ಸಂತತಿಯವರೂ ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು."
ಆ ಕಾಲದಲ್ಲಿ ಯೇಸು ಯೆಹೂದ್ಯರಿಗೆ: "ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯ ಮರಣಕ್ಕೆ ತುತ್ತಾಗನು, ' ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ, " ಎಂದರು. " ನೀನು ದೆವ್ವ ಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, 'ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು, ' ಎಂದು ಹೇಳುತ್ತಿರುವೆ; ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಠನೊ? ಆತನೂ ಸಾವಿಗೀಡಾದನು, ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ? " ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು. ಯೇಸು ಪ್ರತ್ಯುತ್ತರವಾಗಿ, " ನನ್ನ ಘನತೆ ಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆ ಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ' ಅವರು ನಮ್ಮ ದೇವರು' ಎಂದು ನೀವು ಹೇಳಿಕೊಳ್ಳುತ್ತೀರಿ. ಆದರೆ ಅವರ ಅರಿವು ನಿಮಗಿಲ್ಲ ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ. ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು, " ಎಂದು ಉತ್ತರ ಕೊಟ್ಟರು. ಯೆಹೂದ್ಯರು, " ನಿನಗಿನ್ನೂ ಐವತ್ತು ವರ್ಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯಾ? " ಎಂದರು. ಯೇಸು ಅವರಿಗೆ, "ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ, " ಎಂದು ಮರು ನುಡಿದರು. ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟು ಹೋದರು.
25.03.2026 - ಇಗೋ, ನಾನು ದೇವರ ಸೇವಕಿ, ನೀವು ಹೇಳಿದಂತೆ ನನಗಾಗಲಿ
ಮಂಗಳವಾರ್ತೆಯ ಮಹೋತ್ಸವ
ಪುನಃ ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ: “ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ. ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು” ಎಂದರು. ಅದಕ್ಕೆ ಆಹಾಜನು “ಇಲ್ಲ, ನಾನು ಗುರುತನ್ನು ಕೇಳುವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ” ಎಂದನು. ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ? ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭ ತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು. ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”
ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ. ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತ ಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು. ಸರ್ವಾಂಗ ಹೋಮಗಳೂ ಪಾಪ ಪರಿಹಾರಕ ಬಲಿಗಳೂ ನಿಮಗೆ ತರಲಿಲ್ಲ ತೃಪ್ತಿಯನು. ಆಗ ಇಂತೆಂದೆ ನಾನು: ಗ್ರಂಥದ ಸುರುಳಿಯಲಿ ನನ್ನನ್ನು ಕುರಿತು ಬರೆದಿರುವಂತೆ, ಓ ದೇವಾ, ಇಗೋ ನಾ ಬಂದೆ ನಿನ್ನ ಚಿತ್ತವನು ನೆರವೇರಿಸಲೆಂದೇ.” ಧರ್ಮಶಾಸ್ತ್ರದ ವಿಧಿಗನುಸಾರ ಅರ್ಪಿಸಲಾಗುತ್ತಿದ್ದುವಾದರೂ “ಬಲಿಯರ್ಪಣೆಗಳು, ಕಾಣಿಕೆಗಳು, ದಹನಬಲಿಗಳು ಮತ್ತು ಪಾಪ ಪರಿಹಾರಕ ಬಲಿಗಳು ನಿಮಗೆ ಬೇಡವಾದವು; ಇವು ಯಾವುವೂ ನಿಮಗೆ ತರಲಿಲ್ಲ ತೃಪ್ತಿಯನು,” ಎಂದು ಮೊದಲು ಹೇಳುತ್ತಾರೆ. ಅನಂತರ, “ಇಗೋ, ನಾ ಬಂದೆ, ನಿಮ್ಮ ಚಿತ್ತವನ್ನು ನೆರವೇರಿಸಲೆಂದೇ,” ಎನ್ನುತ್ತಾರೆ. ಹೀಗೆ ಹೊಸದನ್ನು ಸ್ಥಾಪಿಸಲು ಹಳೆಯದನ್ನು ರದ್ದು ಮಾಡಿದ್ದಾರೆ. ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.24.03.2026 - ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಂಗಿಯಾಗಿ ಬಿಟ್ಟಿಲ್ಲ
ಮೊದಲನೇ ವಾಚನ: ಸಂಖ್ಯಾಕಾಂಡ 21:4-9
ಯೇಸುಸ್ವಾಮಿ ಯೆಹೂದ್ಯರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು. ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು. “ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ, ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆ ಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು. ಅವರು, “ನೀನು ಯಾರು?” ಎಂದು ಪ್ರಶ್ನಿಸಿದರು. ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು. ಯೇಸುಸ್ವಾಮಿ ತಮ್ಮ ಪಿತನನ್ನು ಕುರಿತು ಹೀಗೆನ್ನುತ್ತಿದ್ದಾರೆಂದು ಅವರು ಅರಿತುಕೊಳ್ಳಲಿಲ್ಲ. ಎಂದೇ ಯೇಸು ಮತ್ತೆ ಇಂತೆಂದರು: “ನರ ಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು. ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಂಗಿಯಾಗಿ ಬಿಟ್ಟಿಲ್ಲ.” ಯೇಸುಸ್ವಾಮಿ ಹೀಗೆ ಹೇಳಿದ್ದನ್ನು ಕೇಳಿ ಹಲವರಿಗೆ ಅವರಲ್ಲಿ ನಂಬಿಕೆ ಹುಟ್ಟಿತು.23.03.2026 - “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ”
ಮೊದಲನೇ ವಾಚನ: ಸುಸನ್ನಳ ಗ್ರಂಥ
ಹಸಿರುಗಾವಲುಗಳಲೆನ್ನ ತಂಗಿಸುವನು I
ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II
ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I
ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II
ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I
ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I
ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II
ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I
ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II
ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I
ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II
ಮನಸ್ಸಿಗೊಂದಿಷ್ಟು : “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ" ಎಂದು ಯೇಸು ಹೇಳಿದ ಮಾತು ಇಷ್ಟು ಸಾವಿರ ವರ್ಷಗಳಾದ ಮೇಲೂ ಇನ್ನೂ ಪ್ರತಿಧ್ವನಿಸುತ್ತಿದೆ. ಆ ಮಹಿಳೆಗೆ ಅಂದು ತೋರಿದ ಕರುಣೆ, ಅನುಕಂಪ ನಮಗೆಲ್ಲಾ ಸ್ಪೂರ್ತಿಯಾಗಬೇಕು. ಮತ್ತೊಬ್ಬರ ಬಗ್ಗೆ ತೀರ್ಪು ಕೊಡಲು ನಮಗೆ ಯಾವುದೇ ಅಧಿಕಾವಿಲ್ಲ, ಅದು ದೇವರ ಹಕ್ಕು ಮಾತ್ರ ಎನ್ನುವುದು ಯೇಸು ತಿಳಿಸಿದ, ಬರೆದ ಸಂದೇಶ.
ಪ್ರಶ್ನೆ : ಮತ್ತೊಬ್ಬರ ತಪ್ಪು ಕಂಡು ಹಿಡಿಯುತ್ತಲೇ ಇರುವ ನಾವೆಷ್ಟು ಶುದ್ಧ?
22.03.2026 - “ಲಾಸರನೇ, ಹೊರಗೆ ಬಾ"
ಮೊದಲನೇ ವಾಚನ: ಯಜೆಕಿಯೇಲ 37:12-14
ಶ್ಲೋಕ: ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭೂ, ನಿನ್ನ ಮುಂದೆ ಯಾರು ತಾನೆ ನಿಲ್ಲಬಲ್ಲರು ವಿಭೂ?
ಮನಸ್ಸಿಗೊಂದಿಷ್ಟು : ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿದ ಯೇಸು, ದೇವರ ಮಹಿಮೆಯನ್ನು ಎಲ್ಲರೂ ಅರಿಯುವಂತಾಗಲು ಲಾಜರನನ್ನು ಜೀವದಿಂದ ಎಬ್ಬಿಸುವ ಘಟನೆಯನ್ನು ಬಳಸಿಕೊಳ್ಳುತ್ತಾರೆ. ನಮ್ಮದಾದರೂ ಇದಕ್ಕೆ ತದ್ವಿರುದ್ಧವಾದ ಮನೋಭಾವ. ನಮ್ಮನ್ನೇ ಇತರರ ಮುಂದೆ ಹೆಚ್ಚಿಸಕೊಳ್ಳಲು ಆದಷ್ಟು ಪ್ರಯತ್ನಿಸುತ್ತೇವೆ, ಅವಕಾಶಕ್ಕಾಗಿ ಪ್ರಯತ್ನಿಸುತ್ತೇವೆ. ದೇವರ ಮಹಿಮೆಗಾಗಿ ಬಾಳೋಣ, ದೇವರ ಮಹಿಮೆಯು ನಮ್ಮ ಮೂಲಕ ನೆರವೇರಲು ಸಾಧನವಾಗೋಣ, ಅಮರ ಜೀವದತ್ತ ಮನಸ್ಸನ್ನು ಹರಿಸೋಣ.
ಪ್ರಶ್ನೆ : ದೇವರ ಮಹಿಮೆಯು ಪ್ರಕಟಗೊಳ್ಳುವ ಸಾಧನ ನಾವಾಗಿದ್ದೇವೆಯೇ?
ಪ್ರಭುವೇ,
ನವ ಜೀವನ ಲಾಜರನದು
ನೀ ಹೊರಗೆ ಬಾ ಎನಲು
ಹೊಸ ಜೀವ ಭಾವ
ನಿನ್ನ ಕರೆಯೊಳು
ನನ್ನದು ನಿನ್ನ
ಮಹಿಮೆಯಲಿ
21.03.2026 - ಈತನೇ ಲೋಕೋದ್ಧಾರಕ
ಮೊದಲನೇ ವಾಚನ: ಯೆರೆಮೀಯ 11:18-20
27.03.2026 - ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು
ಮೊದಲನೇ ವಾಚನ: ಯೆರೆಮಿಯ 20:10-13 ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವರ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹು ಜನರ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18 ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್...
-
ಮೊದಲನೆಯ ವಾಚನ: ಪ್ರೇಷಿತರ ಕಾರ್ಯಕಲಾಪ 7:51-8:1 ಸ್ತೇಫನನು ಮುಂದುವರೆದು, "ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು; ದೇವರ ಸಂದೇಶಕ್ಕೆ ಎಷ್ಟು ಕಿವ...










