ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 20:17-27
ಶ್ಲೋಕ: ಭೂರಾಜ್ಯಗಳೇ, ಸ್ತುತಿಸಿರಿ ದೇವರನು!
ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ. ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು. ಏಕೈಕ ನಿಜ ದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ. ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು. ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ. “ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ. ನೀವು ನನಗೆ ಕೊಟ್ಟಿದೆಲ್ಲವೂ ನಿಜವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ. ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ. “ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ. ಏಕೆಂದರೆ, ಇವರು ನಿಮ್ಮವರು; ಇವರಿಂದ ನನಗೆ ಮಹಿಮೆ ಉಂಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ. ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.



.jpg)







