ಮೊದಲನೇ ವಾಚನ: ೨ ಅರಸುಗಳು 24:8-17
25.06.2026 - ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ
24.06.2026 - "ಇವನ ಹೆಸರು ಯೊವಾನ್ನ
ಮೊದಲನೆಯ ವಾಚನ
ಪ್ರವಾದಿ ಯೆಶಾಯನ ಗ್ರಂಥ 49:1-6
"ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ, "ಇಂತೆಂದುಕೊಂಡೆ ನಾನಾಗ. ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ, ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ. ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ. ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು, ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು, ತನ್ನ ದಾಸನನ್ನಾಗಿ ನನ್ನ ರೂಪಿಸಿದನು. ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲ್ಲಿ; ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲ್ಲಿ. ಮತ್ತೆ ಆತ ಇಂತೆಂದನು ನನಗೆ:
"ಮಹಾತ್ಕಾರ್ಯವೇನೂ ಅಲ್ಲ. ನನ್ನ ದಾಸನಾದ ನಿನಗೆ ಕುಲಗಳನ್ನು ಉದ್ದರಿಸುವ ಮಾತ್ರಕೆ, ಇಸ್ರಯೇಲರಲ್ಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವ ಜನಾಂಗಗಳಿಗೆ, ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟ ಕಡೆಯವರೆಗೆ."
- ಪ್ರಭುವಿನ ವಾಕ್ಯ
ಕೀರ್ತನೆ: 139: 1-3,13-14,15
ಶ್ಲೋಕ: ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ, ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ.
1. ಪ್ರಭೂ, ಪರಿಶೋಧಿಸಿರುವೆ ನೀ ನನ್ನನು|
ನೀ ಅರಿತುಕೊಂಡಿರುವ ಅಂತರಂಗವನು||
ನಾ ಕೂರುವುದೂ ಏಳುವುದು ನಿನಗೆ ಗೊತ್ತಿದೆ|
ನನ್ನ ಆಲೋಚನೆ ದೂರದಿಂದಲೇ ನಿನಗೆ ತಿಳಿದಿದೆ||
ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ|
ನನ್ನ ನಡೆತೆಯಲ್ಲವು ನಿನಗೆ ಸುಪರಿಚಿತ||
2. ನನ್ನ ಅಂತರಂಗವನು ಉಂಟುಮಾಡಿದಾತ ನೀನು|
ತಾಯಗರ್ಭದಲೇ ನನ್ನ ರೂಪಿಸಿದಾತ ನೀನು||
ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ|
ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ||
3. ನನ್ನ ಅಸ್ಥಿಪಂಜರವನು ರೂಪಿಸುವಾಗ|
ತಾಯಗರ್ಭದೊಳು ಅಚ್ಚರದಿ ರಚಿಸುವಾಗ||
ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ|
ಮರೆಯಾಗಿರಲಿಲ್ಲ ನಾನು ನಿನಗಾಗ||
ಎರಡನೆಯ ವಾಚನ : ಪ್ರೇಷಿತರ ಕಾರ್ಯಕಲಾಪ 13:22-26
ಪ್ರಭುವಿನ ವಾಕ್ಯ
ಅಲ್ಲೆಲೂಯ, ಅಲ್ಲೆಲೂಯ!
"ಸುಕುಮಾರ, ನೀನೆನಿಸಿಕೊಳ್ಳುವೆ ಪರಾತ್ಪರನ ಪ್ರವಾದಿ | ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ ಮುಂದಾಗಿ ತೆರಳಿ ||
ಶುಭಸಂದೇಶ : ಲೂಕನು ಬರೆದ ಪವಿತ್ರ ಶುಭಸಂದೇಶದಿಂದ ವಾಚನ 1:57-66,80
ದಿನ ತುಂಬಿದಾಗ ಎಲಿಜಬೇತಳು ಗಂಡು ಮಗುವಿಗೆ ಜನ್ಮವಿತ್ತಳು. ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು. ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿದ್ದರು. ಆದರೆ ಮಗುವಿನ ತಾಯಿ, "ಇಲ್ಲ, ಅದು ಕೂಡದು, ಅವನಿಗೆ 'ಯೊವಾನ್ನ' ಎಂಬ ಹೆಸರಿಡಬೇಕು, " ಎಂದಳು. ಅದಕ್ಕೆ ಅವರು, "ನಿನ್ನ ಬಂಧು ಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ, "ಎಂದು ಹೇಳಿ, "ಮಗುವಿಗೆ ಏನು. ಹೆಸರಿಡಬೇಕೆನ್ನುತ್ತೀರಿ? "ಎಂದು ಮಗುವಿನ ತಂದೆಗೆ ಸನ್ನೆ ಮಾಡಿ ಕೇಳಿದರು. ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, "ಇವನ ಹೆಸರು ಯೊವಾನ್ನ " ಎಂದು ಬರೆದನು. ಎಲ್ಲರೂ ಬೆರಗಾದರು. ತಕ್ಷಣವೇ ಅವನಿಗೆ ಬಾಯಿ ಬಂದಿತು. ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು. ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು. ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ಈ ಮಗು ಮುಂದೆ ಎಂಥವನಾಗುವನೋ! " ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು. ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.
- ಪ್ರಭುಕ್ರಿಸ್ತರ ಶುಭಸಂದೇಶ
23.06.2026 - ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿ ಬಿಟ್ಟಾವು
ಮೊದಲನೇ ವಾಚನ: 2 ಅರಸುಗಳು 19:9-11, 14-21, 31-35, 36
ಸರ್ವ ಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ|
ದೇವನಖರದಲ್ಲಿ ಆತನ ಪವಿತ್ರ ಪರ್ವತ||
ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ|
ಆನಂದದಾಯಕ ರಾಜಾಧಿರಾಜನ ಆ ನಗರ||
ಅದರ ಕೋಟೆಕೊತ್ತಲಗಳ ನಡುವೆ ದೇವನು|
ತಾನೇ ಸುಭದ್ರ ದುರ್ಗವೆಂದು ತೋರಿಹನು||
ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು|
ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು||
ನಿನ್ನ ನಾಮದಂತೆ ನಿನ್ನಾ ಹೊಗಳಿಕೆ|
ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ ||
ಘೋಷಣೆ ಯೊವಾನ್ನ 17:17
ಅಲ್ಲೆಲೂಯ, ಅಲ್ಲೆಲೂಯ!
ಪಿತನೇ, ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.
ಅಲ್ಲೆಲೂಯ!
22.06.2026 - ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ
ಮೊದಲನೇ ವಾಚನ: 2 ಅರಸುಗಳು 17:5-8, 13-15, 18
21.06.2026 - ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು
ಮೊದಲನೇ ವಾಚನ: ಪ್ರವಾದಿ ಯೆರೆಮೀಯನ ಗ್ರಂಥ 20:10-13
20.06.2026 - ಯಾರೂ ಇಬ್ಬರು ಯಜಮಾನನಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುತ್ತಾನೆ
ಮೊದಲನೇ ವಾಚನ: 2 ಪೂರ್ವಕಾಲದ ಇತಿಹಾಸ 24:17-25
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಯಾರೂ ಇಬ್ಬರು ಯಜಮಾನನಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆ ಮಾಡಲು ನಿಮ್ಮಿಂದಾಗದು." "ನಾನು ಹೇಳುವುದನ್ನು ಕೇಳಿ; "ಪ್ರಾಣದಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು" ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದಲ್ಲವೇ? ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನು ಗಮನಿಸಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೇ? ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು? ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ , ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ. ಅಲ್ಪ ವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆ ಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ? ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ. ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿವ ನಿಮ್ಮ ತಂದೆಗೆ ತಿಳಿದಿದೆ. ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು. ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು."19.06.2026 - ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ.
ಮೊದಲನೇ ವಾಚನ: 2 ಅರಸುಗಳು 11:1-4, 8-18, 20
25.06.2026 - ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ
ಮೊದಲನೇ ವಾಚನ: ೨ ಅರಸುಗಳು 24:8-17 ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಜೆರುಸಲೇಮಿನ ಎಲ್ನಾತಾನನ ಮಗಳಾದ ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...












