ಮೊದಲನೇ ವಾಚನ: ಸಿರಾಖನು 48:1-14
18.06.2026 - ಸ್ವರ್ಗದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ
17.06.2026 - ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ
ಮೊದಲನೇ ವಾಚನ: 2 ಅರಸುಗಳು 2:1, 6-14
ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು. ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು. ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು. ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು. ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು. ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು. ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು. ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು. ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು. “ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: " ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು. ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿ ಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ದಾನ ಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು. “ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.” “ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”
16.06.2026 - ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ
ಮೊದಲನೇ ವಾಚನ: 1 ಅರಸುಗಳು 21:17-29
15.06.2026 - ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ.
ಮೊದಲನೇ ವಾಚನ: 1 ಅರಸುಗಳು 21:1-16
14.06.2026 - ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.
ಮೊದಲನೇ ವಾಚನ: ವಿಮೋಚನಕಾಂಡ 19:2-6
ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು. ಮೋಶೆ ಆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು: ‘ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ. ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲೂ ನನಗೆ ಸ್ವಕೀಯ ಜನರಾಗುವಿರಿ. ಅಲ್ಲದೆ ನೀವು ನನಗೆ ಯಾಜಕರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ.’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.
13.06.2026 - ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೆ?
ಮೊದಲನೇ ವಾಚನ: ಯೆಶಾಯ: 61:9-11

12.06.2026 - ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿ ಕೊಡುತ್ತೇನೆ.
ಯೇಸುವಿನ ಪವಿತ್ರ ಹೃದಯದ ಮಹೋತ್ಸವ
![]() |
18.06.2026 - ಸ್ವರ್ಗದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ
ಮೊದಲನೇ ವಾಚನ: ಸಿರಾಖನು 48:1-14 ಎಲೀಯನು ಆಮೇಲೆ ಪ್ರವಾದಿ ಎಲೀಯನೆದ್ದನು ಬೆಂಕಿಯಂತೆ ಉರಿಯಿತವನ ನುಡಿ ಪಂಜಿನಂತೆ. ಕ್ಷಾಮವನ್ನು ಬರಮಾಡಿದನಿವನು ಜನರ ಮೇಲೆ ಅವರನ್ನು ಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...











