“ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡರು” - 01.12.2009

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ ೧೦:೨೧-೨೪

“ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡರು”

ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇವೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವರೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು. ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು, ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕು, ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ” ಎಂದರು.


No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...