ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವವನು - 03.12.09

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ 7:21,24-27

“ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವನು.”

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ನನ್ನನ್ನು ‘ಸ್ವಾಮಿ, ಸ್ವಾಮಿ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು. ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನು ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ದಿವಂತನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು. ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ. ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬೊತ್ತು. ಅದಕ್ಕಾದ ಪತನವೋ ಅಗಾಧ !”

1 comment:

  1. ದೇವವಾರ್ತೆಯನ್ನು ಪಸರಿಸುವ ನಿಟ್ಟಿನಲ್ಲಿ ಇದೊಂದು ಒಳ್ಳೆಯ ಪ್ರಯತ್ನ. ಮುಂದುವರಿಸಿ.

    ಪ್ರೀತಿಯಿಂದ
    ಸಿ ಮರಿಜೋಸೆಫ್

    ReplyDelete

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...