ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ - 05.12.09

ಸಂತ ಮತ್ತಾಯನು ಬರೆದ  ಶುಭ ಸಂದೇಶದಿಂದ ವಾಚನ   9:35, 10:1,6-8
 
"ಯೇಸುಸ್ವಾಮಿ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು”

ಯೇಸುಸ್ವಾಮಿ, ಊರೂರುಗಳಲ್ಲೂ, ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾ ಮಂದಿರಗಳಲ್ಲಿ ಬೋಧಿಸಿದರು.  ಶ್ರೀಸಾಮ್ರಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ ರೋಗ ರುಜಿನಗಳನ್ನು ಗುಣಪಡಿಸಿದರು.  ಆ ಜನಸೂಮೂಹವನ್ನು ಕಂಡಾಗ ಅವರ ಮನ ಕರಗಿತು.  ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು.  ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು. ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸು ಅವರಿಗೆ ಕೊಟ್ಟ ಆದೇಶವೇನೆಂದರೆ : ತಪ್ಪಿಹೋದ ಕುರುಗಳಂತೆ ಇರುವ ಇಸ್ರಯೇಲ್ ಜನರ ಬಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ.  ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಟರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿರಿ.

No comments:

Post a Comment