ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ - 05.12.09

ಸಂತ ಮತ್ತಾಯನು ಬರೆದ  ಶುಭ ಸಂದೇಶದಿಂದ ವಾಚನ   9:35, 10:1,6-8
 
"ಯೇಸುಸ್ವಾಮಿ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು”

ಯೇಸುಸ್ವಾಮಿ, ಊರೂರುಗಳಲ್ಲೂ, ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾ ಮಂದಿರಗಳಲ್ಲಿ ಬೋಧಿಸಿದರು.  ಶ್ರೀಸಾಮ್ರಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾ ತರಹದ ರೋಗ ರುಜಿನಗಳನ್ನು ಗುಣಪಡಿಸಿದರು.  ಆ ಜನಸೂಮೂಹವನ್ನು ಕಂಡಾಗ ಅವರ ಮನ ಕರಗಿತು.  ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು.  ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು. ಯೇಸುಸ್ವಾಮಿ ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. ಆ ಹನ್ನೆರಡು ಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸು ಅವರಿಗೆ ಕೊಟ್ಟ ಆದೇಶವೇನೆಂದರೆ : ತಪ್ಪಿಹೋದ ಕುರುಗಳಂತೆ ಇರುವ ಇಸ್ರಯೇಲ್ ಜನರ ಬಗೆ ಹೋಗಿರಿ; ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ.  ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಟರೋಗಿಗಳನ್ನು ಸ್ವಸ್ಥಮಾಡಿರಿ, ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿರಿ.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...