“ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸಲಿಲ್ಲ”
ಬೆಟ್ಟದಿಂದ ಇಳಿದು ಬರುವಾಗ ಶಿಷ್ಯರು” ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲ ಅದು ಹೇಗೆ?”ಎಂದು ಯೇಸುವನ್ನು ಕೇಳಿದರು.ಅದಕ್ಕೆ ಪ್ರತ್ಯುತ್ತರವಾಗಿ ಯೇಸು.“ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸಿವನು ಎಂಬುದು ನಿಜ. ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟ ಬಂದ ಹಾಗೆ ಹಿಂಸಿಸಿದ್ದೂ ಆಗಿದೆ.ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು” ಎಂದರು.ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.
No comments:
Post a Comment