12.12.09 - ಎಲೀಯನು ಈಗಾಗಲೇ ಬಂದಾಗಿದೆ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - ೧೭: ೧೦-೧೩


“ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸಲಿಲ್ಲ”

ಬೆಟ್ಟದಿಂದ ಇಳಿದು ಬರುವಾಗ ಶಿಷ್ಯರು” ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲ ಅದು ಹೇಗೆ?”ಎಂದು ಯೇಸುವನ್ನು ಕೇಳಿದರು.ಅದಕ್ಕೆ ಪ್ರತ್ಯುತ್ತರವಾಗಿ ಯೇಸು.“ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸಿವನು ಎಂಬುದು ನಿಜ. ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟ ಬಂದ ಹಾಗೆ ಹಿಂಸಿಸಿದ್ದೂ ಆಗಿದೆ.ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು” ಎಂದರು.ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...