12.12.09 - ಎಲೀಯನು ಈಗಾಗಲೇ ಬಂದಾಗಿದೆ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - ೧೭: ೧೦-೧೩


“ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸಲಿಲ್ಲ”

ಬೆಟ್ಟದಿಂದ ಇಳಿದು ಬರುವಾಗ ಶಿಷ್ಯರು” ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲ ಅದು ಹೇಗೆ?”ಎಂದು ಯೇಸುವನ್ನು ಕೇಳಿದರು.ಅದಕ್ಕೆ ಪ್ರತ್ಯುತ್ತರವಾಗಿ ಯೇಸು.“ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸಿವನು ಎಂಬುದು ನಿಜ. ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟ ಬಂದ ಹಾಗೆ ಹಿಂಸಿಸಿದ್ದೂ ಆಗಿದೆ.ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು” ಎಂದರು.ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...