12.12.09 - ಎಲೀಯನು ಈಗಾಗಲೇ ಬಂದಾಗಿದೆ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ - ೧೭: ೧೦-೧೩


“ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸಲಿಲ್ಲ”

ಬೆಟ್ಟದಿಂದ ಇಳಿದು ಬರುವಾಗ ಶಿಷ್ಯರು” ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲ ಅದು ಹೇಗೆ?”ಎಂದು ಯೇಸುವನ್ನು ಕೇಳಿದರು.ಅದಕ್ಕೆ ಪ್ರತ್ಯುತ್ತರವಾಗಿ ಯೇಸು.“ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸಿವನು ಎಂಬುದು ನಿಜ. ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟ ಬಂದ ಹಾಗೆ ಹಿಂಸಿಸಿದ್ದೂ ಆಗಿದೆ.ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು” ಎಂದರು.ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...