14.12.09- ಸ್ನಾನದೀಕ್ಷೆ ಕೊಡುವ ಅಧಿಕಾರ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ -  21: 23-27


“ಸ್ನಾನದೀಕ್ಷೆ ಕೊಡುವ ಅಧಿಕಾರ ಎಲ್ಲಿಂದ ಬಂದಿತು?.”

ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆ ಮಾಡತೊಡಗಿದರು.ಮುಖ್ಯ ಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು. ಅದಕ್ಕೆ ಯೇಸು, “ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ಉತ್ತರಕೊಟ್ಟರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.

‘ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?” ಎಂದು ಕೇಳಿದರು. ಅದಕ್ಕೆ ಅವರು ತಮ್ಮ ತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಅತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸೂಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ” ಎಂದುಕೊಂಡರು. ಬಳಿಕ ಬಂದು, “ನಮಗೆ ಗೊತ್ತಿಲ್ಲ,” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು, “ಹಾಗಾದರೆ, ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...