14.12.09- ಸ್ನಾನದೀಕ್ಷೆ ಕೊಡುವ ಅಧಿಕಾರ

ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ -  21: 23-27


“ಸ್ನಾನದೀಕ್ಷೆ ಕೊಡುವ ಅಧಿಕಾರ ಎಲ್ಲಿಂದ ಬಂದಿತು?.”

ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆ ಮಾಡತೊಡಗಿದರು.ಮುಖ್ಯ ಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು. ಅದಕ್ಕೆ ಯೇಸು, “ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ಉತ್ತರಕೊಟ್ಟರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.

‘ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?” ಎಂದು ಕೇಳಿದರು. ಅದಕ್ಕೆ ಅವರು ತಮ್ಮ ತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಅತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸೂಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ” ಎಂದುಕೊಂಡರು. ಬಳಿಕ ಬಂದು, “ನಮಗೆ ಗೊತ್ತಿಲ್ಲ,” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು, “ಹಾಗಾದರೆ, ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...