16.12.09 - ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 7: 19-23

“ನೀವು ಕಂಡದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ತಿಳಿಸಿರಿ.”

ಸ್ನಾನಿಕ ಯೊವಾನ್ನನ್ನು, ತನ್ನು ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬರಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು. ಆ ಶಿಷ್ಯರು ಯೇಸುವಿನ ಬಳಿಗೆ ಬಂದು, “ಬರಬೇಕಾದವರು ನೀವೋ ಅಥವಾ ನಾವು ಬೇರೊಬ್ಬರನ್ನು ಎದುರುನೋಡಬೇಕೋ ಎಂದು ವಿಚಾರಿಸಲು ಸ್ನಾನಿಕ ಯೊವನ್ನನು ನಮ್ಮನ್ನು ತಮ್ಮ ಬಳಿಗೆ ಕಳುಹಿಸಿದ್ದಾರೆ,”ಎಂದರು.ಅದೇ ಸಮಯದಲ್ಲಿ ಯೇಸು ರೋಗ ರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವು ಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು. ಯೇಸು ಅವರಿಗೆ ಪ್ರತ್ಯುತ್ತರವಾಗಿ,“ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ : ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ. ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.

No comments:

Post a Comment

12.04.2026 - ನನ್ನ ಪ್ರಭುವೇ, ನನ್ನ ದೇವರೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47 ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮ...