16.12.09 - ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 7: 19-23

“ನೀವು ಕಂಡದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ತಿಳಿಸಿರಿ.”

ಸ್ನಾನಿಕ ಯೊವಾನ್ನನ್ನು, ತನ್ನು ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬರಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು. ಆ ಶಿಷ್ಯರು ಯೇಸುವಿನ ಬಳಿಗೆ ಬಂದು, “ಬರಬೇಕಾದವರು ನೀವೋ ಅಥವಾ ನಾವು ಬೇರೊಬ್ಬರನ್ನು ಎದುರುನೋಡಬೇಕೋ ಎಂದು ವಿಚಾರಿಸಲು ಸ್ನಾನಿಕ ಯೊವನ್ನನು ನಮ್ಮನ್ನು ತಮ್ಮ ಬಳಿಗೆ ಕಳುಹಿಸಿದ್ದಾರೆ,”ಎಂದರು.ಅದೇ ಸಮಯದಲ್ಲಿ ಯೇಸು ರೋಗ ರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವು ಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು. ಯೇಸು ಅವರಿಗೆ ಪ್ರತ್ಯುತ್ತರವಾಗಿ,“ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ : ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ. ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...