17-12-2009 - ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ

ಸಂತ ಲೂಕನು ಬರೆದ ಶುಭ ಸಂದೇಶದಿಂದ ವಾಚನ - 7: 24:30

“ಇಗೋ,ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು.ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು.”

ಯೇಸು ಜನ ಸಮೂಹಕ್ಕೆ ಯೊವಾನ್ನನನ್ನು ಕುರಿತು ಹೀಗೆಂದರು : “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ?
ಗಾಳಿಗೆ ಓಲಾಡುವ ಜೊಂಡನ್ನೇ? ಇಲ್ಲವಾದರೆ ಮತ್ತೇನನ್ನು ನೋಡಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿರುವ
ವ್ಯಕ್ತಿಯನ್ನೇ?ಅಂಥ ಶೃಂಗಾರವಾದ ಉಡುಗೆ ತೊಡುಗೆಯನ್ನು ಧರಿಸಿ, ಭೋಗ ಜೀವನ ನಡೆಸುವವರು ಅರಮನೆಗಳಲ್ಲಿರುತ್ತಾರಷ್ಟೆ!

ಹಾಗಾದರೆ ನೀವು ಇನ್ನೇನನ್ನು ನೋಡಲು ಹೋದಿರಿ? ಪ್ರವಾದಿಯನ್ನೇ? ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ, ಎಂಬುದು ನಿಜ. ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು ಎಂದು ಪವಿತ್ರಗ್ರಂಥದಲ್ಲಿ ಪ್ರಸ್ತಾಪಿಸಿರುವುದು ಈ ಯೊವಾನ್ನನನ್ನು ಕುರಿತೇ. ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.

ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು. ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೇಕ್ಷೆಯನ್ನು ಪಡೆಯದೆ ಹೋದರು.

No comments:

Post a Comment

15.07.2026 - ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ10:5-7, 13-16 ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ. ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀ...