ಸಂತ ಲೂಕ ಬರೆದ ಶುಭ ಸಂದೇಶದಿಂದ ವಾಚನ - 1:39-45
ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣ ಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಆಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿಂದ ಹೀಗೆಂದಳು;
"ಸ್ತ್ರೀಯರಲ್ಲಿ ಧನ್ಯಳು ನೀನು;
ನಿನ್ನ ಕರುಳ ಕುಡಿಯೂ ಧನ್ಯ!"
ನನ್ನ ಪ್ರಭುವಿನ ತಾಯಿ ನೀನು;
ನನ್ನ ಬಳಿಗೆ ಬಂದದು ಅದೆಂಥ ಭಾಗ್ಯ!
ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ
ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ!
ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ
ನೆರವೇರಿಯೇ ತೀರುವುದಂದು."
ಪವಿತ್ರ ವಾಚನಗಳನ್ನು ಬ್ಲಾಗಿನ ಮೂಲಕ ತಲುಪಿಸುವ ಚಿಗುರು, ಸುಶ್ರಾವ್ಯ ಹಾಗೂ ಸಂಚಲನ ಬಳಗದ ಪ್ರಯತ್ನವಿದು. ಓದಿ ಧ್ಯಾನಿಸುವ ಭಾಗ್ಯ ನಮ್ಮದಾಗಲಿ
Subscribe to:
Post Comments (Atom)
09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ
ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 58:1-9 ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18 ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್...
No comments:
Post a Comment