21.12.09 - "ನಂಬಿ ಧನ್ಯಳಾದೆ ನೀನು"

ಸಂತ ಲೂಕ ಬರೆದ ಶುಭ ಸಂದೇಶದಿಂದ ವಾಚನ - 1:39-45


ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣ ಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಆಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿಂದ ಹೀಗೆಂದಳು;
"ಸ್ತ್ರೀಯರಲ್ಲಿ ಧನ್ಯಳು ನೀನು;
ನಿನ್ನ ಕರುಳ ಕುಡಿಯೂ ಧನ್ಯ!"
ನನ್ನ ಪ್ರಭುವಿನ ತಾಯಿ ನೀನು;
ನನ್ನ ಬಳಿಗೆ ಬಂದದು ಅದೆಂಥ ಭಾಗ್ಯ!
ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ
ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ!
ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ
ನೆರವೇರಿಯೇ ತೀರುವುದಂದು."

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...