ಸಂತ ಲೂಕ ಬರೆದ ಶುಭ ಸಂದೇಶದಿಂದ ವಾಚನ - 1:39-45
ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣ ಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು. ಆಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ ಹರ್ಷೋದ್ಗಾರದಿಂದ ಹೀಗೆಂದಳು;
"ಸ್ತ್ರೀಯರಲ್ಲಿ ಧನ್ಯಳು ನೀನು;
ನಿನ್ನ ಕರುಳ ಕುಡಿಯೂ ಧನ್ಯ!"
ನನ್ನ ಪ್ರಭುವಿನ ತಾಯಿ ನೀನು;
ನನ್ನ ಬಳಿಗೆ ಬಂದದು ಅದೆಂಥ ಭಾಗ್ಯ!
ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ
ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ!
ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ
ನೆರವೇರಿಯೇ ತೀರುವುದಂದು."
Subscribe to:
Post Comments (Atom)
15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ
ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 52:13-53:12 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ. ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ...
-
ಮೊದಲನೇ ವಾಚನ: 2 ತಿಮೊಥೇಯನಿಗೆ 4:1-8 ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನ...
No comments:
Post a Comment