ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

31.12.09 - ದಿವ್ಯವಾಣಿ

ಸಂತ ಯೊವಾನ್ನನು ಬರೆದ ಶುಭ ಸಂದೇಶದಿಂದ ವಾಚನ - 1:  1-18


“ ಅ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸ ಮಾಡಿದರು’

ಜಗತ್ತು ಉಂಟಾಗುವ ಮೊದಲೇ “ದಿವ್ಯವಾಣಿ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು.
ಆ ದಿವ್ಯವಾಣಿ ದೇವರೊಂದಿಗೇ ಇದ್ದರು; ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು.
ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು.
ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಲ್ಲ.
ಆ ದಿವ್ಯವಾಣಿ ಸಜ್ಜೀವವಿತ್ತು. ಆಜೀವವೇ ಮಾನವ ಜನಾಂಗದ ಜ್ಯೋತಿಯಾಗಿತ್ತು.
ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ, ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.
ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು, ಆತನ ಹೆಸರು ಯೊವಾನ್ನ.
ಈತನು ಸಾಕ್ಷಿ ಕೊಡಲು ಬಂದನು.
ತನ್ನ ಮುಖಾಂತರವೇ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಿದನು.
ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು.
ನಿಜವಾದ ಜ್ಯೋತಿ ಆ ದಿವ್ಯವಾಣಿಯೇ.
ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.
ದಿವ್ಯವಾಣಿ ಲೋಕದಲ್ಲಿ ಇದ್ದರು, ಅವರ ಮುಖಾಂತರವೇ ಲೋಕವು ಉಂಟಾಯಿತು.
ಲೋಕವಾದರೋ ಅವರನ್ನು ಅರಿತುಕೊಳ್ಳದೇ ಹೋದರು.
ಕೆಲವರಾದರೋ ಅವರನ್ನು ಬರಮಾಡಿಕೊಂಡರು.
ಅಂಥವರಿಗೆ, ಅಂದರೆ, ಅವರಲ್ಲಿ ವಿಶ್ವಾಸವಿಟ್ಟವರಿಗೆ,
ದೇವರ ಮಕ್ಕಳಾಗುವ ಹಕ್ಕನ್ನು ಕೊಟ್ಟರು
ಅಂಥವರ ಜನನವು ರಕ್ತ ಸಂಬಂಧದಿಂದ ಅಲ್ಲ,ಶಾರೀರಿಕ ಇಚ್ಛೆಯಿಂದ ಅಲ್ಲ,
ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದ ಆದುದು.
ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸ ಮಾಡಿದರು.
ಅವರ ಮಹಿಮೆಯನ್ನು ನಾವು ನೋಡಿದೆವು.
ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ.
ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.
ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ,
“’ಅವರು ನನ್ನ ಬಳಿಕ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದ್ದು ಅವರನ್ನು ಕುರಿತೇ,”ಎಂದು ಘೋಷಿಸಿದನು.ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ವರಪ್ರಸಾದದ ಮೇಲೆ ವರಪ್ರಸಾದ ಪಡೆದಿದ್ದೇವೆ.

ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು.ವರಪ್ರಸಾದ ಹಾಗು ಸತ್ಯವಾದರೋ ಯೇಸುಕ್ರಿಸ್ತರ ಮುಖಾಂತರ ಬಂದವು ಯಾರೂ ಎಂದು ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತ: ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.

No comments:

Post a Comment