ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟ ಕುರುಡರು ಗುಣಹೊಂದಿದರು


ಸಂತ ಮತ್ತಾಯನು ಬರೆದ ಶುಭ ಸಂದೇಶದಿಂದ ವಾಚನ   - 9:27-31

“ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟ ಇಬ್ಬರು ಕುರುಡರು ಗುಣಹೊಂದಿದರು.”


ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆ ಹೋದರು. ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು. ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ವಿಸ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ,” ಎಂದರು. ಅವರಿಗೆ ದೃಷ್ಠಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.

No comments:

Post a Comment

12.04.2026 - ನನ್ನ ಪ್ರಭುವೇ, ನನ್ನ ದೇವರೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47 ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮ...