ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ : 6:34-44
ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು
ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ದ ಸಮೂಹವೇ ಸೇರಿತ್ತು. ಆ ಜನರು ಕುರಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.ಅಷ್ಟರಲ್ಲಿ ಸಂಜೆಯಾಗುತ್ತಾ ಬಂತು.ಶಿಷ್ಯರು ಯೇಸುವಿನ ಬಳಿಗೆ ಬಂದು "ಈಗಾಗಲೇ ಹೊತ್ತು ಮೀರಿ ಹೋಯಿತು;ಇದು ನಿರ್ಜನ ಪ್ರದೇಶ; ಇನ್ನು ಜನರನ್ನು ಕಳುಹಿಸಿಬಿಡಿ.ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟಕ್ಕೆ ಏನಾದರು ಕೊಂಡಿಕೊಳ್ಳಲಿ,’ ಎಂದರು.’ ಆಗ ಯೇಸು ,"ನೀವೇ ಅವರಿಗೆ ಊಟಕ್ಕೇನಾದರು ಕೊಡಿ," ಎಂದರು. ಅದಕ್ಕೆ ಶಿಷ್ಯರು " ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡು ತಂದು ಅವರಿಗೆ ಊಟಕ್ಕೆ ಬಡಿಸೋಣವೇನು?" ಎಂದರು. ಯೇಸು, "ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿಕೊಂಡು ಬನ್ನಿ." ಎಂದರು. ಅವರು ವಿಚಾರಿಸಿಕೊಂಡೂ ಬಂದು, ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ," ಎಂದು ತಿಳಿಸಿದರು.
ಎಲ್ಲರು ಪಂಕ್ತಿ ಪಂಕ್ತಿಯಾಗಿ ಹಸಿರು ಹುಲ್ಲಿನ ಮೇಲೆ ಊಟಕ್ಕೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆ ಮಾಡಿದರು. ಅವರು ಐವತ್ತರಂತೆಯೂ ನೂರರಂತೆಯೂ ಪಂಕ್ತಿಯಲ್ಲಿ ಕುಳಿತರು.ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನನ್ನು ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ಮೀನುಗಳ ತಿಂದು ತೃಪ್ತರಾದರು ಇನ್ನೂ ಉಳಿದಿದ್ದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಒಟ್ಟುಗೂಡಿಸಿದಾಗ, ಅವು ಹನ್ನೆರೆಡು ಬುಟ್ಟಿ ತುಂಬ ಆದವು.ಊಟ ಮಾಡಿದವರಲ್ಲಿ ಗಂಡಸರ ಸಂಖ್ಯೆಯೇ ಐದು ಸಾವಿರ.
No comments:
Post a Comment