ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 6:45-52
ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಬಳಿಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದಲ್ಲಿದ್ದರು.
ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡಿವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು. ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕೆ ಹೋದರು. ಕತ್ತಲೆ ಕವಿದಾಗ ದೋಣಿಯು ಸರೋವರದ ಮಧ್ಯೆ ಸಾಗಿತ್ತು. ಇತ್ತ ಯೇಸು ಒಬ್ಬರೇ ದಡದಲ್ಲಿದ್ದರು.ಎದುರುಗಾಳಿ ಬೀಸುತ್ತಿದ್ದರಿಂದ ಶಿಷ್ಯರು ಹುಟ್ಟು ಹಾಕಿ ದಣಿದು ಹೋಗಿದ್ದರು. ಇದನ್ನು ಕಂಡು ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಬಳಿಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದಲ್ಲಿದ್ದರು. ಆಗ ಸುಮಾರು ರಾತ್ರಿಯ ಕಡೆ ಜಾವದ ಸಮಯ.ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ಶಿಷ್ಯರು ನೋಡಿದರು; ಭೂತವೆಂದು ಭಾವಿಸಿ ಭಯದಿಂದ ಚೀರಿದರು.ಅವರೆಲ್ಲರೂ ಯೇಸುವನ್ನು ನೋಡಿ ದಿಗಿಲುಗೊಂಡಿದ್ದರು.
ತಕ್ಷಣವೇ ಯೇಸು ಅವರೊಡನೆ ಮಾತನಾಡುತ್ತಾ, " ಭಯಪಡಬೇಡಿ, ಬೇರೆ ಯಾರೂ ಅಲ್ಲ, ನಾನೇ; ಧೈರ್ಯದಿಂದಿರಿ," ಎಂದು ಅವರೊಡನೆ ಮಾತಾಡಿ ದೋಣಿಯನ್ನು ಹತ್ತಿದರು. ಆಗ ಎದುರುಗಾಳಿ ನಿಂತಿ ಹೋಯಿತು. ಶಿಷ್ಯರು ಬೆಕ್ಕಸ ಬೆರಗಾದರು. ಅವರ ಬುದ್ಧಿ ಮಂದವಾಗಿತ್ತು. ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ.
No comments:
Post a Comment