07.01.10 - ,ದೀನ ದಲಿತರಿಗೆ ಶುಭ ಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ.

ಸಂತ ಲೂಕ ಬರೆದ ಶುಭ ಸಂದೇಶದಿಂದ ವಾಚನ - 4: 14 -22

"ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆ ಅದು ಇಂದು ನೆರವೇರಿತು"


ಯೇಸು ಸ್ವಾಮಿ ಪವಿತ್ರಾತ್ಮರ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿ ಬಂದರು.ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು. ಅಲ್ಲಿನ ಪ್ರಾರ್ಥನಾ ಮಂದಿರದಲ್ಲಿ ಅವರು ಬೋಧಿಸುತ್ತಾ ಬಂದರು. ಎಲ್ಲರು ಅವರನ್ನು ಹೊಗಳುವವರೇ! ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್ ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರ ಗ್ರಂಥವನ್ನು ಓದುವುದಕ್ಕೆ ಅವರು ಎದ್ದು ನಿಂತಾಗ, ಪ್ರವಾದಿ ಯೆಶಾಯನ ಗ್ರಂಥದ ಸುರಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು; ದೇವರಾತ್ಮ ನನ್ನ ಮೇಲಿದೆ,ದೀನ ದಲಿತರಿಗೆ ಶುಭ ಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ. ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಠಿದಾನವನ್ನು ಪ್ರಕಟಿಸಲೂ, ಶೋಷಿತರಿಗೆ ಸ್ವಾತ್ರಂತ್ಯ ನೀಡಲೂ ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ".

ಈ ವಾಕ್ಯವನ್ನು ಓದಿ,ಸುರಳಿಯನ್ನು ಸುತ್ತಿ ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. ಆಗ ಯೇಸು, ನೀವು "ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆ ಅದು ಇಂದು ನೆರವೇರಿತು," ಎಂದು ವಿವರಿಸಲಾರಂಭಿಸಿದರು. ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು."ಇವನು ಜೋಸೆಫನ ಮಗನಲ್ಲವೆ?" ಎಂದು ಮಾತನಾಡಿಕೊಂಡರು.

No comments:

Post a Comment

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...