ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

08.01.10- "ತಾವು ಮನಸ್ಸು ಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ"

ಸಂತ ಲೂಕ ಬರೆದ ಶುಭ ಸಂದೇಶದಿಂದ ವಾಚನ - 5 : 12-16

ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ತಮ್ಮ ರೋಗ ರುಜಿನಗಳನ್ನು ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು.

ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿಯೊಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡ ಬಿದ್ದು, "ಸ್ವಾಮಿ, ತಾವು ಮನಸ್ಸು ಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ.’ ಎಂದು ಬೇಡಿಕೊಂಡನು. ಯೇಸು ಕೈ ಚಾಚಿ ಅವನನ್ನು ಮುಟ್ಟಿ "ಖಂಡಿತವಾಗಿಯೂ ನನಗೆ ಮನಸ್ಸಿದೆ ಗುಣವಾಗಲಿ." ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು. ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ "ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು;ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ;ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಢೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ." ಎಂದರು.

ಯೇಸು ಎಷ್ಟು ಎಚ್ಚರಿಸಿದರೋ ಅಷ್ಟು ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ತಮ್ಮ ರೋಗ ರುಜಿನಗಳನ್ನು ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು. ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.

No comments:

Post a Comment