09.01.10 - “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು"

ಸಂತ ಯೊವಾನ್ನನು ಬರೆದ ಶುಭ ಸಂದೇಶದಿಂದ ವಾಚನ - 3:22-30

"ಆತನ ಸ್ವರ ಕೇಳಿ ಹರ್ಷಿಸುತ್ತಾನೆ.ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.”
ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು. ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನ ದೀಕ್ಷೆಯನ್ನು ಮಾಡಿಸುತ್ತಿದ್ದನು.ಜನರು ಬಂದು ಸ್ನಾನ ದೀಕ್ಷೆಯನ್ನು ಪಡೆಯುತ್ತಿದ್ದರು. ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ.

ಶುದ್ಢಾಚಾರವನ್ನು ಕುರಿತು ಯೊವಾನ್ನನ ಶಿಷ್ಯರಿಗೂ ಯೆಹೂದ್ಯನೊಬ್ಬನಿಗೂ ವಿವಾದ ಎದ್ದಿತು. ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡಾನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೇ ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೇ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಅತನ ಬಳಿಗೆ ಹೋಗುತ್ತಿದ್ದಾರೆ,” ಎಂದು ದೂರಿತ್ತರು. ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು.‘ನಾನು ಲೋಕೋದ್ಧಾರಕನಲ್ಲ; ಆತನ ಮುಂದೂತ ಮಾತ್ರ’ ಎಂದು ನಾನು ಹೇಳೀದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. ಮದುಮಗಳು ಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ.ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.” ಎಂದನು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...