16.01.10 - "ನನ್ನನ್ನು ಹಿಂಬಾಲಿಸು"

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ  - 2:13-17

ಸುಂಕದವರು, ಪಾಪಿಷ್ಠರು, ಇವರೆಲ್ಲರು ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು.

ಯೇಸುಸ್ವಾಮಿ ಪುನ: ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಭೋದಿಸಿದರು. ಅಲ್ಲಿಂದ ಹೊರಟು ಹೋಗುತ್ತಿರುವಾಗ, ಅಲ್ಫಾಯನ ಮಗನಾದ ಲೇವಿಯ ಸುಂಕವಸೂಲಿಗಾಗಿ ಉಕ್ಕಡದಲ್ಲಿ ಕುಳಿತ್ತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು. ತದ ನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತ್ತಿದ್ದರು. ಬಹು ಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರು ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು. ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟ ಮಾಡುವುದನ್ನು ಕಂಡು, “ಈತನನ್ನು ಇಂಥಾ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು.

No comments:

Post a Comment

13.04.2026 - ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:23-31 ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯ ಯಾಜಕರು ಹಾಗೂ ಪ್...