18.01.2010 - ಹಳೆಯ ಅಂಗಿ; ಹೊಸ ತೇಪೆ.

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ 2: 18-22

"ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ?"

ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತವನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ, ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸ ವ್ರತಗಳನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ?” ಎಂದು ಕೇಳಿದರು. ಅದಕ್ಕೆ ಯೇಸು. ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೂತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು. ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು. “ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರು ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರು ತುಂಬಿಡುವುದಿಲ್ಲ. ತುಂಬಿಟ್ಟರೆ ಅದರಿಂದ ಬುದ್ದಲಿಗಳು ಬಿರಿಯುತ್ತದೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತದೆ. ಆದುದರಿಂದ ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...