19.01.2010- "ನರಪುತ್ರನು ಸಬ್ಬತ್ತಿಗೂ ಒಡೆಯ”

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ - 2: 23-28

“ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ."

ಅದೊಂದು ಸಬ್ಬತ್ ದಿನ. ಯೇಸುಸ್ವಾಮಿ ಗೋಧಿಯ ಹೊಲಗಳಲ್ಲಿ ಹಾದು ಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು. ಇದನ್ನು ಕಂಡ ಫರಿಸಾಯರು, “ನೋಡು, ಸಬ್ಬತ್  ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ? ಪ್ರಧಾನ ಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ,ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?” ಎಂದು ಅವರನ್ನು ಕೇಳಿದರು. ಬಳಿಕ ಯೇಸು ಅವರಿಗೆ, “ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ. ಅದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...