20.01.2010 - "ನಿನ್ನ ಕೈಯನ್ನು ಚಾಚು”

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ :  3: 1- 6

“ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೊ ಅಥವಾ ಕೆಡುಕನ್ನೊ?

ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನ: ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು. ಅವನನ್ನು ಸಬ್ಬತ್ ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು. ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ, “ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೊ ಅಥವಾ ಕೆಡುಕನ್ನೊ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ. ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣ ಸ್ವಸ್ಥವಾಯಿತು. ಫರಿಸಾಯರು ಅಲ್ಲಿಂದ ಹೊರಗೆ ಹೋದರು. ಕೊಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...