20.01.2010 - "ನಿನ್ನ ಕೈಯನ್ನು ಚಾಚು”

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ :  3: 1- 6

“ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೊ ಅಥವಾ ಕೆಡುಕನ್ನೊ?

ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನ: ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು. ಅವನನ್ನು ಸಬ್ಬತ್ ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು. ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ, “ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೊ ಅಥವಾ ಕೆಡುಕನ್ನೊ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ. ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣ ಸ್ವಸ್ಥವಾಯಿತು. ಫರಿಸಾಯರು ಅಲ್ಲಿಂದ ಹೊರಗೆ ಹೋದರು. ಕೊಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.

No comments:

Post a Comment

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...