21.01.2010 - “ನೀವು ದೇವರ ಪುತ್ರ”

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ್ 3: 7-12

ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.

ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟು ಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು. ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದುಮೇಯ ಪ್ರಾಂತ್ಯದಿಂದ, ಜೋರ್ಡನ್ ನದಿಯ ಪೂರ್ವ ಪ್ರದೇಶ ಹಾಗು ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು. ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು. ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು. ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ” ಎಂದು ಕಿರುಚುತ್ತಿದ್ದವು. ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...