22.01.2010 - ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ - 3: 13-19

ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು.

ಅನಂತರ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು. “ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳಹಿಸುತ್ತೇನೆ. ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ”, ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ: ಸಿಮೋನ(ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು). ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ(ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು). ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು ಮುಂದೆ ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...