25.01.2010 - ಜಗತ್ತಿಗೆಲ್ಲಾ ಶುಭ ಸಂದೇಶವನ್ನು ಪ್ರಬೋಧಿಸಿರಿ

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 16: 15-18

"ಕೈಗಳಿಂದ ಸರ್ಪಗಳನ್ನು ಎತ್ತಿದರೂ,ವಿಷ ಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು"


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು;"ನೀವು ಎಲ್ಲೆಡೆಗಳಿಗೂ ಹೋಗಿ,ಜಗತ್ತಿಗೆಲ್ಲಾ ಶುಭ ಸಂದೇಶವನ್ನು ಪ್ರಬೋಧಿಸಿರಿ.ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು.ವಿಶ್ವಾಸಿಸದಿರುವವವನು ಖಂಡನೆಗೆ ಗುರಿಯಾಗುವನು.ವಿಶ್ವಾಸಿಸುವುದರಿಂದ ಈ ಅದ್ಭುತ ಕಾರ್ಯಗಳು ಆಗುವುವು.ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು;ಹೊಸ ಭಾಷೆಗಳಲ್ಲಿ ಮಾತಾಡುವರು.;ಕೈಗಳಿಂದ ಸರ್ಪಗಳನ್ನು ಎತ್ತಿದರೂ, ವಿಷ ಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು.ಅವರು ರೋಗಿಗಳ ಮೇಲೆ ಕೈಯಿಟ್ಟರೆ ರೋಗಿಗಳು
ಗುಣ ಹೊಂದುವರು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...