ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 16: 15-18
"ಕೈಗಳಿಂದ ಸರ್ಪಗಳನ್ನು ಎತ್ತಿದರೂ,ವಿಷ ಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು"
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು;"ನೀವು ಎಲ್ಲೆಡೆಗಳಿಗೂ ಹೋಗಿ,ಜಗತ್ತಿಗೆಲ್ಲಾ ಶುಭ ಸಂದೇಶವನ್ನು ಪ್ರಬೋಧಿಸಿರಿ.ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು.ವಿಶ್ವಾಸಿಸದಿರುವವವನು ಖಂಡನೆಗೆ ಗುರಿಯಾಗುವನು.ವಿಶ್ವಾಸಿಸುವುದರಿಂದ ಈ ಅದ್ಭುತ ಕಾರ್ಯಗಳು ಆಗುವುವು.ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು;ಹೊಸ ಭಾಷೆಗಳಲ್ಲಿ ಮಾತಾಡುವರು.;ಕೈಗಳಿಂದ ಸರ್ಪಗಳನ್ನು ಎತ್ತಿದರೂ, ವಿಷ ಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು.ಅವರು ರೋಗಿಗಳ ಮೇಲೆ ಕೈಯಿಟ್ಟರೆ ರೋಗಿಗಳು
ಗುಣ ಹೊಂದುವರು.
No comments:
Post a Comment