29.01.10 - ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆ

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 4 : 26-34

ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು

ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: " ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ.ಬಿತ್ತನೆಯಾದ ಬಳಿಕ ಅವನು ರಾತ್ರಿಯಲ್ಲಿ ಮಲಗಿರಲಿ, ಹಗಲಲ್ಲಿ ಎದ್ದಿರಲಿ, ಅವನಿಗೆ ಹೇಗೆಂದು ತಿಳಿಯದೆಯೇ ಆ ಬೀಜವು ಮೊಳೆತು ಬೆಳೆಯುತ್ತಿರುತ್ತದೆ.ಭೂಮಿ ಮೊದಲು ಸಸಿಯನ್ನೂ ಅನಂತರ ಹೊಡೆಯನ್ನು ತರುವಾಯ ತೆನೆತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಉತ್ಪತ್ತಿ ಮಾಡುತ್ತದೆ. ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ," ಎಂದರು.ಯೇಸುಸ್ವಾಮಿ ತಮ್ಮ ಉಪದೇಶವನ್ನು ಮುಂದುವರಿಸಿ," ದೇವರ ಸಾಮ್ರಾಜ್ಯವನ್ನು ಇನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ? ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆ ಕಾಳಿಗೂ ಅದನ್ನು ಹೋಲಿಸಬಹುದು.ಸಾಸಿವೆ ಕಾಳು ಚಿಕ್ಕದಾಗಿದ್ದರೂ ಬಿತ್ತನೆಯ ತರುವಾಯ ಮೊಳೆತು, ಎಲ್ಲಾ ಕಾಯಿಪಲ್ಯದ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆಯುತ್ತದೆ.

ಹಕ್ಕಿಗಳು ಕೂಡ ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುವಷ್ಟು ದೊಡ್ಡದಾಗಿ ರಂಬೆಯನ್ನು ಅದು ತಳೆಯುತ್ತದೆ" ಎಂದರು. ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ. ಆದರೆ ತಮ್ಮ ಆಪ್ತ ಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...