03.02.10 - ಇವನು ಪಡೆದಿರುವ ಜ್ಞಾನವಾದರೂ ಎಂಥದ್ದು?

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 6:1-6


ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,"
ಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು. ಸಬ್ಬತ್ ದಿನ ಅಲ್ಲಿಯ ಪ್ರಾರ್ಥನಾ ದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ? ಅವನು ಬಡಗಿಯಲ್ಲವೇ ಮರಿಯಳ ಮಗನಲ್ಲವೇ? ಯಕೋಬ,ಯೋಸೆ, ಯೂದ ಮತ್ತು ಸಿಮೋನರ ಸಹೋದರನಲ್ಲವೇ? ಇವನ ಸಹೋದರಿಯರು ಇಲ್ಲಿಯೇ ವಾಸ ಮಾಡುತ್ತಿಲ್ಲವೇ?"ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.ಆಗ ಯೇಸು,"ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು ಆದರೆ ಸ್ವಗ್ರಾಮದಲ್ಲಿ,ಸ್ವಜನರಲ್ಲಿ,ಸ್ವಗೃಹದಲ್ಲಿ ಗೌರವ ದೊರಕದು," ಎಂದರು. ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ವವಾದ ಕಾರ್ಯಗಳನ್ನೂ ಅವರು ಇಲ್ಲಿ ಮಾಡಲಾಗಲಿಲ್ಲ. ಆ ಜನರ ಅವಿಶ್ವಾಸವನ್ನು
ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.

No comments:

Post a Comment

15.07.2026 - ಯೇಸುಸ್ವಾಮಿ ಅದ್ಭುತ ಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ

  ಮೊದಲನೇ ವಾಚನ: ಪ್ರವಾದಿ ಯೆಶಾಯನ ಗ್ರಂಥ 7:1-9 ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮ...