06.02.10 - ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ - 6: 30 - 34

"ಬನ್ನಿ ಪ್ರತ್ಯೇಕವಾಗಿ ನಾವು ನಿರ್ಜನ ಪ್ರದೇಷಕ್ಕೆ ಹೋಗಿ ವಿಶ್ರಮಿಸಿಕೊಂಡು ಬರೋಣ,”

ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗೂ ನೀಡಿದ ಬೋಧನೆಯ ವರದಿಅಯನ್ನು ಒಪ್ಪಿಸಿದರು. ಜನರು ಗುಂಪು ಗುಂಪಾಗಿ ಎಡಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟ ಮಾಡಲೂ ಬಿಡುವಿರಲಿಲ್ಲ. ಆದುದರಿಂದ ಯೇಸು, "ಬನ್ನಿ ಪ್ರತ್ಯೇಕವಾಗಿ ನಾವು ನಿರ್ಜನ ಪ್ರದೇಷಕ್ಕೆ ಹೋಗಿ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು.ಆದರೆ ಅವರು ಹೋಗಿತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿ ಆ ಸ್ಥಲವನ್ನು ಸೇರಿದರು. ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು. ಆನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.

No comments:

Post a Comment

12.04.2026 - ನನ್ನ ಪ್ರಭುವೇ, ನನ್ನ ದೇವರೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47 ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮ...