08.02.10 - ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು

ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ - 6: 53-56


ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು
ಅವರೆಲ್ಲರೂ ಸರೋವರವನ್ನು ದಾಟಿ ಗನಸರೇತ್ ಊರಿನ ದಡ ಸೇರಿದರು. ಅವರು ದೋಣಿಯನ್ನು ಕಟ್ಟಿ. ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲ್ಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಮೇತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು. ಯೇಸು ಹಳ್ಳಿಗಳಿಗಾಗಲಿ, ಪಟ್ಟಣ ಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನು ಅಲ್ಲಿಯ ಸಂತೆ ಬೀದಿ ಚೌಕಗಳಿಗೆ ಕರೆತರುತ್ತಿದ್ದರು. ಅವರ ಉಡುಪಿನ ಅಂಚನ್ನಾದರೂ ಮುಟ್ಟುಗೂಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.

1 comment:

  1. dearly beloved in christ jesus
    i read the above gods word.its really touched me. i belive that jesus is a divine healer.

    your brother in christ jesus
    j.anthony raj

    ReplyDelete

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...