10.02.10 - ಕೇಳುವುದಕ್ಕೆ ಕಿವಿಯಿರುವವನು ಕೇಳಲಿ

ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 7:14-23

"ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ"

ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು," ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ."ಮನುಷ್ಯನ ಅಂತರಂಗದಿಂದ ಹೊರ ಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯಿರುವವನು ಕೇಳಲಿ)" ಎಂದರು. ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು. ಅದಕ್ಕೆ ಅವರು,"ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ?"ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ.ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ ಅವನ ಹೊಟ್ಟೆಯನ್ನು ಮಾತ್ರ ಸೇರಿ ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ.(ಹೀಗೆ ಆಹಾರ ಪದಾರ್ಥಗಳು ಯವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು).

ಆದರೆ ಮನುಷ್ಯನ ಅಂತರಂಗದಿಂದ ಹೊರ ಹೊಮ್ಮುವ ಯೋಚನೆಗಳು ಅವನನ್ನುಕಲುಷಿತಗೊಳಿಸುತ್ತದೆ.ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಕೆಡುಕುತನ, ಮೋಸ,ಭಂಡತನ,ಅಸೂಯೆ,ಅಪದೂರು,ಅಹಂಕಾರ,ಮೂರ್ಖತನ ಮೊದಲಾದವು ಹೊರಬರುತ್ತವೆ. ಈ ಎಲ್ಲಾ ಕೇಡುಗಳು
ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ," ಎಂದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...