ಸಂತ ಮಾರ್ಕನು ಬರೆದ ಶುಭ ಸಂದೇಶದಿಂದ ವಾಚನ - 7:31-37
ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ;ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!"
ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೋಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು.ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು.ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು. ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು. ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು.ಬಳಿಕ ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೀರ್ಘವಾಗಿ ಉಸಿರೆಳೆದು.'ಎಪ್ಪಥಾ’ಎಂದರೆ ತೆರೆಯಲಿ ಎಂದರು.ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು;ಅವನು ಸರಾಗವಾಗಿ ಮಾತನಾಡತೊಡಗಿದನು. ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು.ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರ ಮಾಡಿದರು.ಎಲ್ಲರೂ ಆಶ್ಚರ್ಯಭರಿತರಾಗಿ," ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!" ಎಂದುಕೊಳ್ಳುತ್ತಿದ್ದರು.
No comments:
Post a Comment